ಈ ಬಗ್ಗೆ ಅವರು ವಿಶ್ವವಿದ್ಯಾಲಯ ಕುಲಪತಿಗೆ ಪತ್ರ ಬರೆದಿದ್ದಾರೆ. ‘ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಎಂ.ಎ ಪ್ರವೇಶಾತಿಗೆ ಪದವಿ ಹಂತದಲ್ಲಿ ಕನ್ನಡವನ್ನು ಐಚ್ಛಿಕವಾಗಿ ಅಥವಾ ಸಾಮಾನ್ಯ ವಿಷಯವಾಗಿ ಓದಿರುವುದನ್ನು ಪರಿಗಣಿಸುತ್ತಿವೆ. 5 ವರ್ಷಗಳ ಬಿ.ಎ. ಆನರ್ಸ್ ಪದವಿ, ಪಿಯುಸಿ ನಂತರದ ಕನ್ನಡ ಡಿಪ್ಲೊಮಾ, ರಾಜ್ಯ ಸರ್ಕಾರದ ಪಂಡಿತ ಪರೀಕ್ಷೆ, ಬಿ.ಇಡಿ ಪದವಿ, ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ರತ್ನ ಹಾಗೂ ಮದ್ರಾಸು ವಿಶ್ವವಿದ್ಯಾಲಯದ ವಿದ್ವತ್ ಪರೀಕ್ಷೆಗಳಲ್ಲಿ ಉತ್ತೀರ್ಣರಾದವರನ್ನೂ ಪರಿಗಣಿಸುತ್ತಿವೆ. ಬೆಂಗಳೂರು ವಿಶ್ವವಿದ್ಯಾಲಯ ಮಾತ್ರ ಈ ರೀತಿಯ ಷರತ್ತನ್ನು ವಿಧಿಸುವುದು ಯಾವ ನ್ಯಾಯ’ ಎಂದು ಪ್ರಶ್ನಿಸಿದ್ದಾರೆ.