<p><strong>ಬೆಂಗಳೂರು</strong>: ‘ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರವು ಎಂ.ಎ ಪ್ರವೇಶಾತಿಗೆ ಪದವಿಯಲ್ಲಿ ಐಚ್ಛಿಕ ಕನ್ನಡ ವ್ಯಾಸಂಗ ಮಾಡಿದವರನ್ನು ಮಾತ್ರ ಪರಿಗಣಿಸುತ್ತಿದೆ. ಇದರಿಂದಾಗಿ ಭಾಷಾ ವಿದ್ಯಾರ್ಥಿಗಳು ಪ್ರವೇಶಾತಿಯಿಂದ ವಂಚಿತರಾಗುತ್ತಿದ್ದಾರೆ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಬೇಸರ ವ್ಯಕ್ತಪಡಿಸಿದ್ದಾರೆ.</p>.<p>ಈ ಬಗ್ಗೆ ಅವರು ವಿಶ್ವವಿದ್ಯಾಲಯ ಕುಲಪತಿಗೆ ಪತ್ರ ಬರೆದಿದ್ದಾರೆ. ‘ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಎಂ.ಎ ಪ್ರವೇಶಾತಿಗೆ ಪದವಿ ಹಂತದಲ್ಲಿ ಕನ್ನಡವನ್ನು ಐಚ್ಛಿಕವಾಗಿ ಅಥವಾ ಸಾಮಾನ್ಯ ವಿಷಯವಾಗಿ ಓದಿರುವುದನ್ನು ಪರಿಗಣಿಸುತ್ತಿವೆ. 5 ವರ್ಷಗಳ ಬಿ.ಎ. ಆನರ್ಸ್ ಪದವಿ, ಪಿಯುಸಿ ನಂತರದ ಕನ್ನಡ ಡಿಪ್ಲೊಮಾ, ರಾಜ್ಯ ಸರ್ಕಾರದ ಪಂಡಿತ ಪರೀಕ್ಷೆ, ಬಿ.ಇಡಿ ಪದವಿ, ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ರತ್ನ ಹಾಗೂ ಮದ್ರಾಸು ವಿಶ್ವವಿದ್ಯಾಲಯದ ವಿದ್ವತ್ ಪರೀಕ್ಷೆಗಳಲ್ಲಿ ಉತ್ತೀರ್ಣರಾದವರನ್ನೂ ಪರಿಗಣಿಸುತ್ತಿವೆ. ಬೆಂಗಳೂರು ವಿಶ್ವವಿದ್ಯಾಲಯ ಮಾತ್ರ ಈ ರೀತಿಯ ಷರತ್ತನ್ನು ವಿಧಿಸುವುದು ಯಾವ ನ್ಯಾಯ’ ಎಂದು ಪ್ರಶ್ನಿಸಿದ್ದಾರೆ.</p>.<p>‘ವಿಶ್ವವಿದ್ಯಾಲಯದ ಈ ಕ್ರಮ ಸರಿಯಲ್ಲ. ಕನ್ನಡ ಸ್ನಾತಕೋತ್ತರ ಅಧ್ಯಯನ ಬಯಸಿ ಬರುವ ವಿದ್ಯಾರ್ಥಿಗಳ ಆಸಕ್ತಿಗೆ ತಣ್ಣೀರೆರಚುವ ಕೆಲಸ ಮಾಡದೆ ಅವರಿಗೆ ಪ್ರವೇಶಾತಿ ನೀಡಲು ಮುಂದಾಗಬೇಕು’ ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರವು ಎಂ.ಎ ಪ್ರವೇಶಾತಿಗೆ ಪದವಿಯಲ್ಲಿ ಐಚ್ಛಿಕ ಕನ್ನಡ ವ್ಯಾಸಂಗ ಮಾಡಿದವರನ್ನು ಮಾತ್ರ ಪರಿಗಣಿಸುತ್ತಿದೆ. ಇದರಿಂದಾಗಿ ಭಾಷಾ ವಿದ್ಯಾರ್ಥಿಗಳು ಪ್ರವೇಶಾತಿಯಿಂದ ವಂಚಿತರಾಗುತ್ತಿದ್ದಾರೆ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಬೇಸರ ವ್ಯಕ್ತಪಡಿಸಿದ್ದಾರೆ.</p>.<p>ಈ ಬಗ್ಗೆ ಅವರು ವಿಶ್ವವಿದ್ಯಾಲಯ ಕುಲಪತಿಗೆ ಪತ್ರ ಬರೆದಿದ್ದಾರೆ. ‘ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಎಂ.ಎ ಪ್ರವೇಶಾತಿಗೆ ಪದವಿ ಹಂತದಲ್ಲಿ ಕನ್ನಡವನ್ನು ಐಚ್ಛಿಕವಾಗಿ ಅಥವಾ ಸಾಮಾನ್ಯ ವಿಷಯವಾಗಿ ಓದಿರುವುದನ್ನು ಪರಿಗಣಿಸುತ್ತಿವೆ. 5 ವರ್ಷಗಳ ಬಿ.ಎ. ಆನರ್ಸ್ ಪದವಿ, ಪಿಯುಸಿ ನಂತರದ ಕನ್ನಡ ಡಿಪ್ಲೊಮಾ, ರಾಜ್ಯ ಸರ್ಕಾರದ ಪಂಡಿತ ಪರೀಕ್ಷೆ, ಬಿ.ಇಡಿ ಪದವಿ, ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ರತ್ನ ಹಾಗೂ ಮದ್ರಾಸು ವಿಶ್ವವಿದ್ಯಾಲಯದ ವಿದ್ವತ್ ಪರೀಕ್ಷೆಗಳಲ್ಲಿ ಉತ್ತೀರ್ಣರಾದವರನ್ನೂ ಪರಿಗಣಿಸುತ್ತಿವೆ. ಬೆಂಗಳೂರು ವಿಶ್ವವಿದ್ಯಾಲಯ ಮಾತ್ರ ಈ ರೀತಿಯ ಷರತ್ತನ್ನು ವಿಧಿಸುವುದು ಯಾವ ನ್ಯಾಯ’ ಎಂದು ಪ್ರಶ್ನಿಸಿದ್ದಾರೆ.</p>.<p>‘ವಿಶ್ವವಿದ್ಯಾಲಯದ ಈ ಕ್ರಮ ಸರಿಯಲ್ಲ. ಕನ್ನಡ ಸ್ನಾತಕೋತ್ತರ ಅಧ್ಯಯನ ಬಯಸಿ ಬರುವ ವಿದ್ಯಾರ್ಥಿಗಳ ಆಸಕ್ತಿಗೆ ತಣ್ಣೀರೆರಚುವ ಕೆಲಸ ಮಾಡದೆ ಅವರಿಗೆ ಪ್ರವೇಶಾತಿ ನೀಡಲು ಮುಂದಾಗಬೇಕು’ ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>