ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಡಿಎ: ಕನ್ನಡ ಅನುಷ್ಠಾನದಲ್ಲಿ ಹಿನ್ನಡೆ

ಪ್ರಗತಿ ಪರಿಶೀಲನೆ ಸಭೆಯಲ್ಲಿ ನಾಗಾಭರಣ ಅಸಮಾಧಾನ
Last Updated 21 ಮೇ 2022, 19:46 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಎಂಜಿನಿಯರಿಂಗ್ ವಿಭಾಗ ಮತ್ತು ನಗರ ಯೋಜನೆ ವಿಭಾಗದಲ್ಲಿ ಕೆಲವು ಟಿಪ್ಪಣಿಗಳು, ಪತ್ರ ವ್ಯವಹಾರಗಳು, ದರ ಪಟ್ಟಿ, ಅಂದಾಜು ಪಟ್ಟಿಗಳು ಇಂಗ್ಲಿಷ್‌ನಲ್ಲಿರುವುದಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಟಿ.ಎಸ್.ನಾಗಾಭರಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಡಿಎಆಯುಕ್ತರ ಕಚೇರಿ ಯಲ್ಲಿಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ಬಿಡಿಎ ಅಧಿಕಾರಿಗಳಿಂದ ಕನ್ನಡ ಅನುಷ್ಠಾನದ ಬಗ್ಗೆ ಮಾಹಿತಿ ಪಡೆದುಕೊಂಡರು. ‘ಇಂಗ್ಲಿಷ್‌ನಲ್ಲಿರುವ ದರಪಟ್ಟಿ, ಅಂದಾಜುಪಟ್ಟಿಗಳು ಸೇರಿದಂತೆ ವಿವಿಧ ದಾಖಲಾತಿಗಳನ್ನು ಶೀಘ್ರವೇ ಕನ್ನಡಕ್ಕೆ ಅನುವಾದ ಮಾಡಿ, ಇವುಗಳು ಕನ್ನಡದಲ್ಲಿಯೇ ಇರುವಂತೆ ಸಂಬಂಧಪಟ್ಟವರಿಗೆ ಆದೇಶಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

‘ಇಂಗ್ಲಿಷ್‌ನಲ್ಲಿ ಜಾಹೀರಾತು ನೀಡಿರುವ ಬಗ್ಗೆ ಪ್ರಾಧಿಕಾರ ಶಿಸ್ತುಕ್ರಮಕ್ಕೆ ಶಿಫಾರಸ್ಸು ಮಾಡಿದ್ದರೂ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ. ಪುನಃ ಕನ್ನಡದ ದಿನಪತ್ರಿಕೆಗಳಲ್ಲೀ ಇಂಗ್ಲಿಷ್‌ನಲ್ಲೇ ಜಾಹೀರಾತು ನೀಡುತ್ತಿರುವುದು ಅಧಿಕಾರಿಗಳ ಬೇಜವಾಬ್ದಾರಿ ನಡೆ. ಜಾಹೀರಾತುಗಳು, ನಾಮಫಲಕಗಳು, ನಕ್ಷೆಗಳು, ರಶೀದಿಗಳು, ನಿವೇಶನ ಹಂಚಿಕೆಯ ಆದೇಶಗಳು, ಸೇವಾ ಸಿಂಧು ಸಕಾಲ ಅರ್ಜಿ ನಮೂನೆಗಳು, ಬಿಡಿಎ ನೀತಿಗಳು ಇಂಗ್ಲಿಷ್‌ನಲ್ಲಿಯೇ ಇವೆ. ಇದನ್ನು ಕೂಡಲೇ ತಿದ್ದುಪಡಿ ಮಾಡಬೇಕು. 15 ದಿನಗಳಲ್ಲಿ ಸಂಪೂರ್ಣವಾಗಿ ಕನ್ನಡ ಅನುಷ್ಠಾನಗೊಳಿಸಿ, ವರದಿಯನ್ನು ಪ್ರಾಧಿಕಾರಕ್ಕೆ ಕಳುಹಿಸಬೇಕು’ ಎಂದು ಆದೇಶಿಸಿದರು.

‘ಬಿಡಿಎ, ಬಿಬಿಎಂಪಿ ಹಾಗೂ ಬೆಂಗಳೂರು ನಗರ ಜಿಲ್ಲೆ ಅಧಿಕಾರಿಗಳು ಜಂಟಿಯಾಗಿ ಕನ್ನಡ ಅನುಷ್ಠಾನಕ್ಕೆ ಯೋಜನೆ ಸಿದ್ಧಪಡಿಸಬೇಕು’ ಎಂದರು.

‘ಕಾಲಕಾಲಕ್ಕೆ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನೆ ಮಾಡಿ, ಸಲಹೆ ಸೂಚನೆಗಳನ್ನು ನೀಡಿದ್ದರೂ ತಂತ್ರಾಂಶದಲ್ಲಿ ಕನ್ನಡ ಅನುಷ್ಠಾನಕ್ಕೆ ಹಿನ್ನಡೆಯಾಗಿದೆ. ಸಾಮಾಜಿಕ ಜಾಲತಾಣ, ಆ್ಯಪ್‌ಗಳು ಮತ್ತು ಸಂದೇಶಗಳು ಕಡ್ಡಾಯವಾಗಿ ಕನ್ನಡದಲ್ಲಿಯೇ ಇರಬೇಕು’ ಎಂದು ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT