ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದಲ್ಲಿ ಸರ್ವಜ್ಞನ ಹೆಸರಿನಲ್ಲಿ ಯಾವುದೇ ಸ್ಮಾರಕ ಇಲ್ಲ. ಅವರ ಕಂಚಿನ ಪ್ರತಿಮೆ ಸ್ಥಾಪಿಸುವ, ಯಾವುದಾದರೂ ಪ್ರಮುಖ ರಸ್ತೆಗೆ ಅವರ ಹೆಸರಿಡುವ ಕುರಿತು ಮತ್ತು ಉದ್ಯಾನಗಳಲ್ಲಿ ಸರ್ವಜ್ಞನ ತ್ರಿಪದಿ ಫಲಕ ಅಳವಡಿಸುವಂತೆ ದಂಡು ಪ್ರದೇಶ ಕನ್ನಡ ಸಂಘಟನೆಗಳ ಒಕ್ಕೂಟ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದೆ. ಇದನ್ನು ಆಧರಿಸಿ ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದಿರುವ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅವರು, ಕ್ರಮ ಕೈಗೊಂಡು 7 ದಿನಗಳಲ್ಲಿ ವರದಿ ಸಲ್ಲಿಸುವಂತೆ ತಿಳಿಸಿದ್ದಾರೆ.