‘ಕನ್ನಡ ವಿಷಯಕ್ಕೆ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಅರ್ಹ ಶಿಕ್ಷಕರನ್ನು ನೇಮಕ ಮಾಡಿರುವ ಬಗ್ಗೆ ಹಾಗೂ ಶಿಕ್ಷಕರಿಗೆ ನಿಯಮಾನುಸಾರ ತರಗತಿಗಳನ್ನು ಹಂಚಿಕೆ ಮಾಡಿರುವ ಬಗ್ಗೆ ಪರಿಶೀಲಿಸಬೇಕು. ವಿದ್ಯಾರ್ಥಿಗಳಿಗೆ ಕನ್ನಡ ಪರೀಕ್ಷೆ ನಡೆಸಿ, ಅಂಕಪಟ್ಟಿಯನ್ನು ವಿತರಿಸಿರುವ ಬಗ್ಗೆ ಕೂಡ ದಾಖಲೆಗಳನ್ನು ಸಂಗ್ರಹಿಸಬೇಕು. ಈ ಬಗ್ಗೆ 15 ದಿನಗಳೊಳಗೆ ಪ್ರಾಧಿಕಾರಕ್ಕೆ ವಿಸ್ತೃತ ವರದಿ ಹಾಗೂ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು’ ಎಂದು ಉಪ ನಿರ್ದೇಶಕರಿಗೆ ನಾಗಾಭರಣ ಅವರು ಸೂಚಿಸಿದ್ದಾರೆ.