ಅಭಿಯಾನದ ಅಂಗವಾಗಿ ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಅವರನ್ನು ಭೇಟಿ ಮಾಡಿದ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ, ಹಕ್ಕೊತ್ತಾಯ ಪತ್ರ ಸಲ್ಲಿಸಿದರು. ‘ವೈದ್ಯಕೀಯ ವಿಶ್ವವಿದ್ಯಾಲಯಗಳು, ವೈದ್ಯಕೀಯ ವೃತ್ತಿ ಶಿಕ್ಷಣ ಸಂಸ್ಥೆಗಳಲ್ಲಿ ಪಠ್ಯೇತರ ವಿಷಯವಾಗಿ ಕನ್ನಡವನ್ನು ಬೋಧಿಸಬೇಕು’ ಎಂದು ಮನವಿ ಮಾಡಿಕೊಂಡರು. ವೈದ್ಯಕೀಯ ವಿದ್ಯಾರ್ಥಿಗಳಿಗೆ ಕನ್ನಡ ಬೋಧನೆ, ವೈದ್ಯ ಪದಕೋಶಗಳ ಬಳಕೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಅವರು ಚರ್ಚಿಸಿದರು.