ಬುಧವಾರ ಮಧ್ಯರಾತ್ರಿ ಕರ್ನಾಟಕ ಭವನದ ಮೊದಲ ಮಹಡಿಯ ಕೊಠಡಿಯಲ್ಲಿ ಪ್ರಾಧಿಕಾರದ ನಿಯೋಗದಲ್ಲಿದ್ದ ಕೆಲವರು ಮದ್ಯ ಸೇವಿಸಿ ಹರಟೆ ಹೊಡೆದು ಗಲಾಟೆ ಮಾಡಿದ್ದರಿಂದ, ಪಕ್ಕದ ಕೊಠಡಿಯಲ್ಲಿದ್ದ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ, ಕ್ರಮ ಕೈಗೊಳ್ಳುವಂತೆ ಪೊಲೀಸ್ ನಿಯಂತ್ರಣ ಕೊಠಡಿಗೆ ಮೌಖಿಕ ದೂರು ನೀಡಿದ್ದರು.