<p><strong>ಬೆಂಗಳೂರು</strong>: ಕನ್ನಡ ಡಿಂಡಿಮ ಪ್ರತಿಷ್ಠಾನದ ವತಿಯಿಂದ ಇದೇ 14ರಂದು ಅಗ್ರಹಾರ ದಾಸರಹಳ್ಳಿಯಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಸಹಸ್ರ ಕಂಠ ಗಾನ ವೈಭವ ಹಾಗೂ ಕನ್ನಡ ಡಿಂಡಿಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿದೆ. </p><p>ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯುರ್ ಆಶ್ರಮದ ವಿದ್ಯಾ ವಾಚಸ್ಪತಿ ವಿಶ್ವ ಸಂತೋಷ ಭಾರತಿ ಸ್ವಾಮೀಜಿ, ‘ಚಲನಚಿತ್ರ ನಟ ಡಾ. ರಾಜ್ಕುಮಾರ್ ಅವರಿಗೆ ಮರಣೋತ್ತರವಾಗಿ ಕನ್ನಡ ಡಿಂಡಿಮ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ. ಪ್ರಶಸ್ತಿಯನ್ನು ಚಿತ್ರನಟ ಶಿವರಾಜ್ಕುಮಾರ್ ಅವರು ಸ್ವೀಕರಿಸಲಿದ್ದಾರೆ’ ಎಂದು ತಿಳಿಸಿದರು. </p><p>‘ಮಹಿಳೆಯರು, ಮಕ್ಕಳು, ಪುರುಷರು ಸೇರಿದಂತೆ ಸುಮಾರು ಮೂರು ಸಾವಿರ ಗಾಯಕರು ಒಂದೇ ವೇದಿಕೆಯಲ್ಲಿ ಕನ್ನಡ ನಾಡ ಗೀತೆಗಳು, ದಾಸರ ಪದಗಳು, ಶಿವಶರಣರ ಹಾಡುಗಳು, ಕಗ್ಗ ತತ್ವ ಪದಗಳು, ಜಾನಪದ ರೈತ ಗೀತೆಗಳನ್ನು ಹಾಡಲಿದ್ದಾರೆ’ ಎಂದು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕನ್ನಡ ಡಿಂಡಿಮ ಪ್ರತಿಷ್ಠಾನದ ವತಿಯಿಂದ ಇದೇ 14ರಂದು ಅಗ್ರಹಾರ ದಾಸರಹಳ್ಳಿಯಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಸಹಸ್ರ ಕಂಠ ಗಾನ ವೈಭವ ಹಾಗೂ ಕನ್ನಡ ಡಿಂಡಿಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿದೆ. </p><p>ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯುರ್ ಆಶ್ರಮದ ವಿದ್ಯಾ ವಾಚಸ್ಪತಿ ವಿಶ್ವ ಸಂತೋಷ ಭಾರತಿ ಸ್ವಾಮೀಜಿ, ‘ಚಲನಚಿತ್ರ ನಟ ಡಾ. ರಾಜ್ಕುಮಾರ್ ಅವರಿಗೆ ಮರಣೋತ್ತರವಾಗಿ ಕನ್ನಡ ಡಿಂಡಿಮ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ. ಪ್ರಶಸ್ತಿಯನ್ನು ಚಿತ್ರನಟ ಶಿವರಾಜ್ಕುಮಾರ್ ಅವರು ಸ್ವೀಕರಿಸಲಿದ್ದಾರೆ’ ಎಂದು ತಿಳಿಸಿದರು. </p><p>‘ಮಹಿಳೆಯರು, ಮಕ್ಕಳು, ಪುರುಷರು ಸೇರಿದಂತೆ ಸುಮಾರು ಮೂರು ಸಾವಿರ ಗಾಯಕರು ಒಂದೇ ವೇದಿಕೆಯಲ್ಲಿ ಕನ್ನಡ ನಾಡ ಗೀತೆಗಳು, ದಾಸರ ಪದಗಳು, ಶಿವಶರಣರ ಹಾಡುಗಳು, ಕಗ್ಗ ತತ್ವ ಪದಗಳು, ಜಾನಪದ ರೈತ ಗೀತೆಗಳನ್ನು ಹಾಡಲಿದ್ದಾರೆ’ ಎಂದು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>