ಕ್ಷೇತ್ರದ ಪ್ರತಿ ಮನೆಗೂ ಹಳದಿ-ಕೆಂಪು ಬಣ್ಣಗಳ ಕನ್ನಡ ಧ್ವಜವನ್ನು ಹಾಗೂ ಸಿಹಿ ತಿನಿಸುಗಳನ್ನು ಬಿಜೆಪಿ ಕಾರ್ಯಕರ್ತರು ವಿತರಿಸಿದರು. ರಾಜ್ಯೋತ್ಸವದ ದಿನ ಬೆಳಿಗ್ಗೆ ಮಲ್ಲೇಶ್ವರಂ 18ನೇ ಅಡ್ಡರಸ್ತೆಯಲ್ಲಿರುವ ಗೋಕಾಕ್ ಚಳವಳಿ ಉದ್ಯಾನದಲ್ಲಿ ಕನ್ನಡ ಧ್ವಜಾರೋಹಣವನ್ನು ಸಚಿವಡಾ. ಸಿ ಎನ್. ಅಶ್ವತ್ಥ
ನಾರಾಯಣ ನೆರವೇರಿಸಲಿದ್ದಾರೆ. ಗಾಯತ್ರೀನಗರ ಮತ್ತು ಸುಬ್ರಹ್ಮಣ್ಯ ನಗರಗಳಲ್ಲಿ ಡಾ.ರಾಜಕುಮಾರ್ ಉದ್ಯಾನ ಮುಂತಾದ ಕಡೆಗಳಲ್ಲಿ ಕನ್ನಡ ಧ್ವಜ ಹಾರಿಸಲಾಗುವುದು.