<p><strong>ಬೆಂಗಳೂರು: ‘</strong>ರಾಜ್ಯದಾದ್ಯಂತ ವ್ಯಾಪಿಸಿರುವ ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಕೈಗಾರಿಕಾ ಪ್ರದೇಶಗಳಲ್ಲಿ ಕನ್ನಡ ಸ್ನೇಹಿ ವಾತಾವರಣ ನಿರ್ಮಾಣವಾಗಬೇಕು. ಸರ್ಕಾರ ಈ ಬಗ್ಗೆ ಕೂಡಲೇ ಕ್ರಮಕ್ಕೆ ಮುಂದಾಗಬೇಕು’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಆಗ್ರಹಿಸಿದ್ದಾರೆ.</p>.<p>ಈ ಬಗ್ಗೆ ಅವರು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಅವರಿಗೆ ಪತ್ರ ಬರೆದಿದ್ದಾರೆ. ‘ಕೆಐಎಡಿಬಿ ಕೈಗಾರಿಕಾ ಪ್ರದೇಶಗಳಲ್ಲಿರುವ ಬಹುಪಾಲು ಕೈಗಾರಿಕೆಗಳು, ತಮ್ಮ ನಾಮಫಲಕಗಳಲ್ಲಿ ಕನ್ನಡಕ್ಕೆ ಪ್ರಾಧಾನ್ಯ ನೀಡುತ್ತಿಲ್ಲ. ಆಡಳಿತ ವ್ಯವಸ್ಥೆಯಲ್ಲಿ ಕನ್ನಡವನ್ನು ಪೋಷಿಸದಿರುವುದು ರಾಜ್ಯದಾದ್ಯಂತ ಪ್ರವಾಸ ಕೈಗೊಂಡಾಗ ಗಮನಕ್ಕೆ ಬಂದಿದೆ’ ಎಂದು ಹೇಳಿದ್ದಾರೆ.</p>.<p>‘ನಾಡಿನ ನೆಲ, ಜಲ, ವಿದ್ಯುತ್ ಸೇರಿದಂತೆ ಎಲ್ಲದರಲ್ಲೂ ಆರ್ಥಿಕ ರಿಯಾಯಿತಿ, ಮೂಲ ಸೌಕರ್ಯಗಳನ್ನು ಪಡೆಯುವ ಕೈಗಾರಿಕೆಗಳು ಇಲ್ಲಿನ ಭಾಷೆ-ಸಂಸ್ಕೃತಿಗೆ ಗೌರವ ಕೊಡಬೇಕು. ಕನ್ನಡದ ಬಗೆಗೆ ಉಪೇಕ್ಷೆ ತೋರುವ ಸಂಸ್ಥೆಗಳಿಗೆ ದಂಡ ವಿಧಿಸುವ ಮೂಲಕ ಅವ್ಯವಸ್ಥೆಯನ್ನು ಸರಿಪಡಿಸಲು ಸರ್ಕಾರ ಮುಂದಾಗಬೇಕು’ ಎಂದು ಆಗ್ರಹಿಸಿದ್ದಾರೆ.</p>.<p>‘ಕೈಗಾರಿಕಾ ಪ್ರದೇಶಗಳಲ್ಲಿ ಸರ್ಕಾರ ನಿರ್ಮಿಸಿರುವ ರಸ್ತೆ, ನಿಲ್ದಾಣಗಳಿಗೆ ಸಾಧಕ ಕನ್ನಡಿಗರ ಹೆಸರುಗಳನ್ನು ಇಡಬೇಕು. ಈ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವ ಕನ್ನಡಿಗರಿಗೆ ತಾವು ಪರಕೀಯರೆನ್ನುವ ಭಾವನೆ ಮೂಡದಿರುವಂತೆ ಮಾಡುವ ಸವಾಲು ಸರ್ಕಾರದ ಮುಂದಿದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: ‘</strong>ರಾಜ್ಯದಾದ್ಯಂತ ವ್ಯಾಪಿಸಿರುವ ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಕೈಗಾರಿಕಾ ಪ್ರದೇಶಗಳಲ್ಲಿ ಕನ್ನಡ ಸ್ನೇಹಿ ವಾತಾವರಣ ನಿರ್ಮಾಣವಾಗಬೇಕು. ಸರ್ಕಾರ ಈ ಬಗ್ಗೆ ಕೂಡಲೇ ಕ್ರಮಕ್ಕೆ ಮುಂದಾಗಬೇಕು’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಆಗ್ರಹಿಸಿದ್ದಾರೆ.</p>.<p>ಈ ಬಗ್ಗೆ ಅವರು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಅವರಿಗೆ ಪತ್ರ ಬರೆದಿದ್ದಾರೆ. ‘ಕೆಐಎಡಿಬಿ ಕೈಗಾರಿಕಾ ಪ್ರದೇಶಗಳಲ್ಲಿರುವ ಬಹುಪಾಲು ಕೈಗಾರಿಕೆಗಳು, ತಮ್ಮ ನಾಮಫಲಕಗಳಲ್ಲಿ ಕನ್ನಡಕ್ಕೆ ಪ್ರಾಧಾನ್ಯ ನೀಡುತ್ತಿಲ್ಲ. ಆಡಳಿತ ವ್ಯವಸ್ಥೆಯಲ್ಲಿ ಕನ್ನಡವನ್ನು ಪೋಷಿಸದಿರುವುದು ರಾಜ್ಯದಾದ್ಯಂತ ಪ್ರವಾಸ ಕೈಗೊಂಡಾಗ ಗಮನಕ್ಕೆ ಬಂದಿದೆ’ ಎಂದು ಹೇಳಿದ್ದಾರೆ.</p>.<p>‘ನಾಡಿನ ನೆಲ, ಜಲ, ವಿದ್ಯುತ್ ಸೇರಿದಂತೆ ಎಲ್ಲದರಲ್ಲೂ ಆರ್ಥಿಕ ರಿಯಾಯಿತಿ, ಮೂಲ ಸೌಕರ್ಯಗಳನ್ನು ಪಡೆಯುವ ಕೈಗಾರಿಕೆಗಳು ಇಲ್ಲಿನ ಭಾಷೆ-ಸಂಸ್ಕೃತಿಗೆ ಗೌರವ ಕೊಡಬೇಕು. ಕನ್ನಡದ ಬಗೆಗೆ ಉಪೇಕ್ಷೆ ತೋರುವ ಸಂಸ್ಥೆಗಳಿಗೆ ದಂಡ ವಿಧಿಸುವ ಮೂಲಕ ಅವ್ಯವಸ್ಥೆಯನ್ನು ಸರಿಪಡಿಸಲು ಸರ್ಕಾರ ಮುಂದಾಗಬೇಕು’ ಎಂದು ಆಗ್ರಹಿಸಿದ್ದಾರೆ.</p>.<p>‘ಕೈಗಾರಿಕಾ ಪ್ರದೇಶಗಳಲ್ಲಿ ಸರ್ಕಾರ ನಿರ್ಮಿಸಿರುವ ರಸ್ತೆ, ನಿಲ್ದಾಣಗಳಿಗೆ ಸಾಧಕ ಕನ್ನಡಿಗರ ಹೆಸರುಗಳನ್ನು ಇಡಬೇಕು. ಈ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವ ಕನ್ನಡಿಗರಿಗೆ ತಾವು ಪರಕೀಯರೆನ್ನುವ ಭಾವನೆ ಮೂಡದಿರುವಂತೆ ಮಾಡುವ ಸವಾಲು ಸರ್ಕಾರದ ಮುಂದಿದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>