‘ಭಾರತೀಯ ಭಾಷಾ ಸಂಸ್ಥಾನವನ್ನು (ಸಿಐಐಎಲ್) ಭಾರತೀಯ ಭಾಷಾ ವಿಶ್ವವಿದ್ಯಾಲಯವನ್ನಾಗಿ (ಬಿಬಿವಿ) ಪರಿವರ್ತಿಸುವುದಕ್ಕೆ ತಮಿಳುನಾಡಿನಲ್ಲಿ ವಿರೋಧ ವ್ಯಕ್ತವಾಗಿದೆ. ಈ ವಿಚಾರವನ್ನು ನಮ್ಮ ಸಂಸದರು, ಕನ್ನಡ ಸಂಘಟನೆಗಳು ಗಂಭೀರವಾಗಿ ಪರಿಗಣಿಸಬೇಕು. ಈ ಪ್ರಸ್ತಾವನೆಯನ್ನು ಕೈಬಿಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು’ ಎಂದು ಬಳಗದ ಸಂಚಾಲಕ ರಾ.ನಂ. ಚಂದ್ರಶೇಖರ ಒತ್ತಾಯಿಸಿದ್ದಾರೆ.