ಸಮಿತಿಯ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು, ‘ರಾಜ್ಯದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಇದೆ. ರಾಜ್ಯ ಭಾಷೆಯ ಪ್ರಾಧಿಕಾರ ಸ್ಥಾಪಿಸುವುದು ಆಯಾ ರಾಜ್ಯ ಸರ್ಕಾರಗಳ ನೈತಿಕ ಜವಾಬ್ದಾರಿ. ಆದರೆ, ಬೇರೊಂದು ರಾಜ್ಯ ಭಾಷೆಯ ಅಭಿವೃದ್ಧಿಗೆ ಕರ್ನಾಟಕ ಸರ್ಕಾರ ಪ್ರಾಧಿಕಾರ ರಚಿಸುವುದು ತನ್ನ ಮಕ್ಕಳಿಗೆ ಅನ್ನ ಹಾಕಲಾರದೆ, ನೆರೆಮನೆಯ ಮಕ್ಕಳಿಗೆ ಮೃಷ್ಟಾನ್ನ ಭೋಜನ ಹಾಕಿದಂತೆ' ಎಂದು ದೂರಿದ್ದಾರೆ.