ಬೆಂಗಳೂರು: ಕನಕಪುರ ರಸ್ತೆ ಕನ್ನಡ ಬಳಗದ ವತಿಯಿಂದ ಪ್ರತಿ ತಿಂಗಳು ನಡೆಯುವ ‘ಕನ್ನಡ ಜಾತ್ರೆ’ ಕಾರ್ಯಕ್ರಮದ ಅಂಗವಾಗಿ ಈ ತಿಂಗಳು ‘ಕನ್ನಡ ಕಂಕಣ’ ಕಾರ್ಯಕ್ರಮ ಫೆ. 20ರಂದು ಸಂಜೆ 5ಕ್ಕೆ ನಗರದ ಜರಗನಹಳ್ಳಿ ಉದ್ಯಾನದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ, ಕನ್ನಡದ ಹೋರಾಟಗಾರ ರಾ.ನಂ.ಚಂದ್ರಶೇಖರ್ ಮತ್ತು ಹಿರಿಯ ಸಾಹಿತಿ ಜರಗನಹಳ್ಳಿ ಶಿವಶಂಕರ್ ಚಾಲನೆ ನೀಡಲಿದ್ದಾರೆ.
ಮಂಜುನಾಥ ಹಾಲುವಾಗಿಲು ಈ ಕಾರ್ಯಕ್ರಮದ ಪರಿಕಲ್ಪನೆ ರೂಪಿಸಿದ್ದಾರೆ ಎಂದು ಕಾರ್ಯಕ್ರಮದ ಆಯೋಜಕಿ ಭಾರ್ಗವಿ ಕನ್ನಡನಾಡು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.