<p><strong>ಬೆಂಗಳೂರು</strong>: ‘ವಿದೇಶಿಯರು ಕೂಡ ಕನ್ನಡ ಭಾಷೆಯನ್ನು ಪ್ರೀತಿಯಿಂದ ಪೂಜಿಸುತ್ತಿದ್ದಾರೆ. ಈ ನೆಲದ ಮೇಲೆ ವಾಸಿಸುವ ಪ್ರತಿಯೊಬ್ಬರೂ ಕನ್ನಡವನ್ನು ಮಾತನಾಡುವ ಮತ್ತು ಗೌರವಿಸುವ ಮೂಲಕ ಈ ಭಾಷೆಯನ್ನು ಪೂಜಿಸುವ ಕೆಲಸವಾಗಬೇಕು’ ಎಂದು ಸಾಹಿತಿ ಚಂದ್ರಶೇಖರ ಕಂಬಾರ ಹೇಳಿದರು. </p>.<p>ನಾಗದೇವನಹಳ್ಳಿಯ ಜಿ.ತಿಮ್ಮಯ್ಯ ಬಡಾವಣೆಯಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಮತ್ತು ದಿವಂಗತ ಚಿತ್ರನಟ ಶಂಕರ್ನಾಗ್ ಅವರ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು. </p>.<p>‘ಕನ್ನಡ ಭಾಷೆ ಮತ್ತು ಇಲ್ಲಿನ ಸಂಸ್ಕೃತಿ ಇಡೀ ದೇಶಕ್ಕೆ ಮಾದರಿಯಾಗಿದೆ. ವಿದೇಶಿಯರು ನಮ್ಮ ದೇಶ ಮತ್ತು ರಾಜ್ಯದ ಸಂಸ್ಕೃತಿ, ಕಲೆ ಮತ್ತು ಸಾಹಿತ್ಯವನ್ನು ಮೈಗೂಡಿಸಿಕೊಂಡು, ಕನ್ನಡ ಕಲಿಯಲು ಮುಂದಾಗುತ್ತಿದ್ದಾರೆ’ ಎಂದು ಹೇಳಿದರು.</p>.<p>ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಸಿ.ಎಂ. ಮಾರೇಗೌಡ, ‘ಬಾಲ್ಯದಲ್ಲಿಯೇ ಮಕ್ಕಳಿಗೆ ಕನ್ನಡ ಭಾಷೆ, ನೆಲ, ಜಲ ಮತ್ತು ನಾಡಿನ ಭವ್ಯ ಇತಿಹಾಸವನ್ನು ತಿಳಿಸುವ ಕೆಲಸವಾಗಬೇಕು. ಈ ನೆಲದಲ್ಲಿ ಅನ್ನ, ನೀರು, ಉದ್ಯೋಗ ಕಂಡುಕೊಂಡು ಜೀವನ ನಡೆಸುವ ಅನ್ಯ ಭಾಷಿಕರು, ಕಡ್ಡಾಯವಾಗಿ ಕನ್ನಡ ಕಲಿಯಲು ಮುಂದಾಗಬೇಕು’ ಎಂದರು.</p>.<p>ಶಂಕರ್ನಾಗ್ ವಿನಾಯಕ ಗೆಳೆಯರ ಬಳಗದ ಅಧ್ಯಕ್ಷ ಎನ್.ಸಿ.ಕುಮಾರ್, ‘ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಮಾನ್ಯತೆ ದೊರಕಿ ಹಲವು ವರ್ಷಗಳು ಕಳೆದಿದ್ದರೂ ಈವರೆಗೂ ಭಾಷಾ ಅಧ್ಯಯನ ಕುರಿತ ಕೆಲಸಗಳನ್ನು ಕೈಗೊಂಡಿಲ್ಲ. ಈ ನಾಡಿನಲ್ಲಿ ವಾಸಿಸುವ ಪ್ರತಿಯೊಬ್ಬರೂ ನಾನು ಕನ್ನಡಿಗ ಎಂದು ತಿಳಿದು ಭಾಷೆಯನ್ನು ಉಳಿಸಿ ಬೆಳೆಸಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ವಿದೇಶಿಯರು ಕೂಡ ಕನ್ನಡ ಭಾಷೆಯನ್ನು ಪ್ರೀತಿಯಿಂದ ಪೂಜಿಸುತ್ತಿದ್ದಾರೆ. ಈ ನೆಲದ ಮೇಲೆ ವಾಸಿಸುವ ಪ್ರತಿಯೊಬ್ಬರೂ ಕನ್ನಡವನ್ನು ಮಾತನಾಡುವ ಮತ್ತು ಗೌರವಿಸುವ ಮೂಲಕ ಈ ಭಾಷೆಯನ್ನು ಪೂಜಿಸುವ ಕೆಲಸವಾಗಬೇಕು’ ಎಂದು ಸಾಹಿತಿ ಚಂದ್ರಶೇಖರ ಕಂಬಾರ ಹೇಳಿದರು. </p>.<p>ನಾಗದೇವನಹಳ್ಳಿಯ ಜಿ.ತಿಮ್ಮಯ್ಯ ಬಡಾವಣೆಯಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಮತ್ತು ದಿವಂಗತ ಚಿತ್ರನಟ ಶಂಕರ್ನಾಗ್ ಅವರ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು. </p>.<p>‘ಕನ್ನಡ ಭಾಷೆ ಮತ್ತು ಇಲ್ಲಿನ ಸಂಸ್ಕೃತಿ ಇಡೀ ದೇಶಕ್ಕೆ ಮಾದರಿಯಾಗಿದೆ. ವಿದೇಶಿಯರು ನಮ್ಮ ದೇಶ ಮತ್ತು ರಾಜ್ಯದ ಸಂಸ್ಕೃತಿ, ಕಲೆ ಮತ್ತು ಸಾಹಿತ್ಯವನ್ನು ಮೈಗೂಡಿಸಿಕೊಂಡು, ಕನ್ನಡ ಕಲಿಯಲು ಮುಂದಾಗುತ್ತಿದ್ದಾರೆ’ ಎಂದು ಹೇಳಿದರು.</p>.<p>ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಸಿ.ಎಂ. ಮಾರೇಗೌಡ, ‘ಬಾಲ್ಯದಲ್ಲಿಯೇ ಮಕ್ಕಳಿಗೆ ಕನ್ನಡ ಭಾಷೆ, ನೆಲ, ಜಲ ಮತ್ತು ನಾಡಿನ ಭವ್ಯ ಇತಿಹಾಸವನ್ನು ತಿಳಿಸುವ ಕೆಲಸವಾಗಬೇಕು. ಈ ನೆಲದಲ್ಲಿ ಅನ್ನ, ನೀರು, ಉದ್ಯೋಗ ಕಂಡುಕೊಂಡು ಜೀವನ ನಡೆಸುವ ಅನ್ಯ ಭಾಷಿಕರು, ಕಡ್ಡಾಯವಾಗಿ ಕನ್ನಡ ಕಲಿಯಲು ಮುಂದಾಗಬೇಕು’ ಎಂದರು.</p>.<p>ಶಂಕರ್ನಾಗ್ ವಿನಾಯಕ ಗೆಳೆಯರ ಬಳಗದ ಅಧ್ಯಕ್ಷ ಎನ್.ಸಿ.ಕುಮಾರ್, ‘ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಮಾನ್ಯತೆ ದೊರಕಿ ಹಲವು ವರ್ಷಗಳು ಕಳೆದಿದ್ದರೂ ಈವರೆಗೂ ಭಾಷಾ ಅಧ್ಯಯನ ಕುರಿತ ಕೆಲಸಗಳನ್ನು ಕೈಗೊಂಡಿಲ್ಲ. ಈ ನಾಡಿನಲ್ಲಿ ವಾಸಿಸುವ ಪ್ರತಿಯೊಬ್ಬರೂ ನಾನು ಕನ್ನಡಿಗ ಎಂದು ತಿಳಿದು ಭಾಷೆಯನ್ನು ಉಳಿಸಿ ಬೆಳೆಸಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>