<p><strong>ಬೆಂಗಳೂರು:</strong> ರಾಷ್ಟ್ರಕವಿ ಡಾ. ಜಿ.ಎಸ್. ಶಿವರುದ್ರಪ್ಪ ಪ್ರತಿಷ್ಠಾನದ ವತಿಯಿಂದ ಜನವರಿ 6ರಂದು ‘ವಿಮರ್ಶೆ: ಸಮಕಾಲೀನ ಸಂದರ್ಭ’ ಎಂಬ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ - ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.</p>.<p>ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆಯಲಿರುವ ವಿಚಾರ ಸಂಕಿರಣಕ್ಕೆ ಕವಿ ಎಚ್.ಎಸ್. ಶಿವಪ್ರಕಾಶ್ ಅವರು ಚಾಲನೆ ನೀಡಲಿದ್ದಾರೆ. ಪ್ರತಿಷ್ಠಾನದ ಅಧ್ಯಕ್ಷ ಮೋಹನಕುಮಾರ್ ಕೊಂಡಜ್ಜಿ ಅಧ್ಯಕ್ಷತೆ ವಹಿಸಲಿದ್ದಾರೆ.</p>.<p><strong>‘ವಿಮರ್ಶೆ:</strong> ಭಾರತೀಯ ಸಂದರ್ಭ’ ಕುರಿತು ಭೋಪಾಲ್ನ ಲೇಖಕ ಉದಯನ್ ವಾಜಪೇಯಿ ಅವರು, ‘ವಿಮರ್ಶೆ: ಕನ್ನಡದ ಸಂದರ್ಭ’ ಕುರಿತು ವಿಮರ್ಶಕ ರಾಜೇಂದ್ರ ಚೆನ್ನಿ ಮತ್ತು ‘ವಿಮರ್ಶೆ: ದಲಿತ ಮತ್ತು ಮಹಿಳಾ ಸಂದರ್ಭ’ ಕುರಿತು ವಿಮರ್ಶಕಿ ತಾರಿಣಿ ಶುಭದಾಯಿನಿ ಅವರು ಮಾತನಾಡಲಿದ್ದಾರೆ ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಷ್ಟ್ರಕವಿ ಡಾ. ಜಿ.ಎಸ್. ಶಿವರುದ್ರಪ್ಪ ಪ್ರತಿಷ್ಠಾನದ ವತಿಯಿಂದ ಜನವರಿ 6ರಂದು ‘ವಿಮರ್ಶೆ: ಸಮಕಾಲೀನ ಸಂದರ್ಭ’ ಎಂಬ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ - ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.</p>.<p>ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆಯಲಿರುವ ವಿಚಾರ ಸಂಕಿರಣಕ್ಕೆ ಕವಿ ಎಚ್.ಎಸ್. ಶಿವಪ್ರಕಾಶ್ ಅವರು ಚಾಲನೆ ನೀಡಲಿದ್ದಾರೆ. ಪ್ರತಿಷ್ಠಾನದ ಅಧ್ಯಕ್ಷ ಮೋಹನಕುಮಾರ್ ಕೊಂಡಜ್ಜಿ ಅಧ್ಯಕ್ಷತೆ ವಹಿಸಲಿದ್ದಾರೆ.</p>.<p><strong>‘ವಿಮರ್ಶೆ:</strong> ಭಾರತೀಯ ಸಂದರ್ಭ’ ಕುರಿತು ಭೋಪಾಲ್ನ ಲೇಖಕ ಉದಯನ್ ವಾಜಪೇಯಿ ಅವರು, ‘ವಿಮರ್ಶೆ: ಕನ್ನಡದ ಸಂದರ್ಭ’ ಕುರಿತು ವಿಮರ್ಶಕ ರಾಜೇಂದ್ರ ಚೆನ್ನಿ ಮತ್ತು ‘ವಿಮರ್ಶೆ: ದಲಿತ ಮತ್ತು ಮಹಿಳಾ ಸಂದರ್ಭ’ ಕುರಿತು ವಿಮರ್ಶಕಿ ತಾರಿಣಿ ಶುಭದಾಯಿನಿ ಅವರು ಮಾತನಾಡಲಿದ್ದಾರೆ ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>