<p><strong>ಬೆಂಗಳೂರು:</strong> ‘ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತವು (ಕೆಎಸ್ಡಿಎಲ್) ತನ್ನ ಉತ್ಪನ್ನಗಳ ಮೇಲೆ ಕನ್ನಡವನ್ನು ಕಡೆಗಣಿಸುತ್ತಿದ್ದು, ಈ ಸಂಸ್ಥೆಯ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಅವರನ್ನು ಆಗ್ರಹಿಸಿದ್ದಾರೆ. </p>.<p>ಈ ಬಗ್ಗೆ ಅವರು ಸಚಿವರಿಗೆ ಪತ್ರ ಬರೆದಿದ್ದಾರೆ. ‘ರಾಜ್ಯದಲ್ಲಿ ತಯಾರಾಗುವ ಎಲ್ಲ ಕೈಗಾರಿಕೆ ಮತ್ತು ಗ್ರಾಹಕ ಉತ್ಪನ್ನಗಳ ಮೇಲೆ ಹೆಸರು ಹಾಗೂ ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳನ್ನು ಕನ್ನಡದಲ್ಲಿಯೂ ಮುದ್ರಿಸಬೇಕು. ಈ ಬಗ್ಗೆ ಕೈಗಾರಿಕೆ ಇಲಾಖೆ ಆದೇಶ ಹೊರಡಿಸಿದೆ. ಆದರೆ, ಇಲಾಖೆಯ ಅಧೀನದಲ್ಲಿರುವ ಕೆಎಸ್ಡಿಎಲ್ ಈ ಆದೇಶಕ್ಕೆ ಯಾವುದೇ ಕಿಮ್ಮತ್ತು ನೀಡದಿರುವುದು ವಿಷಾದನೀಯ. ಕೂಡಲೇ ಸಂಸ್ಥೆಯ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p>‘ಸಂಸ್ಥೆ ಉತ್ಪಾದಿಸುವ ಮೈಸೂರು ಸ್ಯಾಂಡಲ್ ಸೋಪು ಕನ್ನಡಿಗರ ಹೆಮ್ಮೆಯ ಪ್ರತೀಕವಾಗಿದೆ. ಇದು ದೇಶ-ವಿದೇಶಗಳನ್ನು ತಲುಪುವ ಮಾದರಿಯಲ್ಲಿ ಕನ್ನಡಿಗರ ಮನೆ–ಮನಗಳನ್ನು ತಲುಪಿದೆ. ಆದರೆ, ಈ ಸಂಸ್ಥೆಯು ತನ್ನ ಯಾವುದೇ ಉತ್ಪನ್ನಗಳ ಮೇಲೆ ಕನ್ನಡಕ್ಕೆ ಆದ್ಯತೆ ನೀಡದಿರುವುದು ಆಕ್ಷೇಪಾರ್ಹ. ಕೈಗಾರಿಕಾ ಇಲಾಖೆಯೇ ಹೊರಡಿಸಿರುವ ಈ ಆದೇಶವನ್ನು ಉಲ್ಲಂಘಿಸುವ ಮೂಲಕ ನೆಲದ ಕಾನೂನನ್ನು ಅಗೌರವಿಸಿದೆ’ ಎಂದಿದ್ದಾರೆ.</p>.<p>‘ಸಂಸ್ಥೆಯ ಈ ಕನ್ನಡ ವಿರೋಧಿ ಧೋರಣೆಯನ್ನು ಖಂಡಿಸಿ ಹಲವು ಕನ್ನಡ ಪರ ಸಂಘಟನೆಗಳು ಪ್ರಾಧಿಕಾರಕ್ಕೆ ಮನವಿಗಳನ್ನು ಸಲ್ಲಿಸಿವೆ. ಸಂಸ್ಥೆಯ ಎಲ್ಲ ಉತ್ಪನ್ನಗಳ ಮೇಲೆ ಕನ್ನಡದಕ್ಕೆ ಮೊದಲ ಪ್ರಾಶಸ್ತ್ಯವನ್ನು ನೀಡಬೇಕು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಬೇಕು’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತವು (ಕೆಎಸ್ಡಿಎಲ್) ತನ್ನ ಉತ್ಪನ್ನಗಳ ಮೇಲೆ ಕನ್ನಡವನ್ನು ಕಡೆಗಣಿಸುತ್ತಿದ್ದು, ಈ ಸಂಸ್ಥೆಯ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಅವರನ್ನು ಆಗ್ರಹಿಸಿದ್ದಾರೆ. </p>.<p>ಈ ಬಗ್ಗೆ ಅವರು ಸಚಿವರಿಗೆ ಪತ್ರ ಬರೆದಿದ್ದಾರೆ. ‘ರಾಜ್ಯದಲ್ಲಿ ತಯಾರಾಗುವ ಎಲ್ಲ ಕೈಗಾರಿಕೆ ಮತ್ತು ಗ್ರಾಹಕ ಉತ್ಪನ್ನಗಳ ಮೇಲೆ ಹೆಸರು ಹಾಗೂ ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳನ್ನು ಕನ್ನಡದಲ್ಲಿಯೂ ಮುದ್ರಿಸಬೇಕು. ಈ ಬಗ್ಗೆ ಕೈಗಾರಿಕೆ ಇಲಾಖೆ ಆದೇಶ ಹೊರಡಿಸಿದೆ. ಆದರೆ, ಇಲಾಖೆಯ ಅಧೀನದಲ್ಲಿರುವ ಕೆಎಸ್ಡಿಎಲ್ ಈ ಆದೇಶಕ್ಕೆ ಯಾವುದೇ ಕಿಮ್ಮತ್ತು ನೀಡದಿರುವುದು ವಿಷಾದನೀಯ. ಕೂಡಲೇ ಸಂಸ್ಥೆಯ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p>‘ಸಂಸ್ಥೆ ಉತ್ಪಾದಿಸುವ ಮೈಸೂರು ಸ್ಯಾಂಡಲ್ ಸೋಪು ಕನ್ನಡಿಗರ ಹೆಮ್ಮೆಯ ಪ್ರತೀಕವಾಗಿದೆ. ಇದು ದೇಶ-ವಿದೇಶಗಳನ್ನು ತಲುಪುವ ಮಾದರಿಯಲ್ಲಿ ಕನ್ನಡಿಗರ ಮನೆ–ಮನಗಳನ್ನು ತಲುಪಿದೆ. ಆದರೆ, ಈ ಸಂಸ್ಥೆಯು ತನ್ನ ಯಾವುದೇ ಉತ್ಪನ್ನಗಳ ಮೇಲೆ ಕನ್ನಡಕ್ಕೆ ಆದ್ಯತೆ ನೀಡದಿರುವುದು ಆಕ್ಷೇಪಾರ್ಹ. ಕೈಗಾರಿಕಾ ಇಲಾಖೆಯೇ ಹೊರಡಿಸಿರುವ ಈ ಆದೇಶವನ್ನು ಉಲ್ಲಂಘಿಸುವ ಮೂಲಕ ನೆಲದ ಕಾನೂನನ್ನು ಅಗೌರವಿಸಿದೆ’ ಎಂದಿದ್ದಾರೆ.</p>.<p>‘ಸಂಸ್ಥೆಯ ಈ ಕನ್ನಡ ವಿರೋಧಿ ಧೋರಣೆಯನ್ನು ಖಂಡಿಸಿ ಹಲವು ಕನ್ನಡ ಪರ ಸಂಘಟನೆಗಳು ಪ್ರಾಧಿಕಾರಕ್ಕೆ ಮನವಿಗಳನ್ನು ಸಲ್ಲಿಸಿವೆ. ಸಂಸ್ಥೆಯ ಎಲ್ಲ ಉತ್ಪನ್ನಗಳ ಮೇಲೆ ಕನ್ನಡದಕ್ಕೆ ಮೊದಲ ಪ್ರಾಶಸ್ತ್ಯವನ್ನು ನೀಡಬೇಕು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಬೇಕು’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>