<p><strong>ಬೆಂಗಳೂರು</strong>: ಆದರ್ಶ ಸುಗಮ ಸಂಗೀತ ಅಕಾಡೆಮಿ ನೀಡುವ 2023ನೇ ಸಾಲಿನ ‘ಕನ್ನಡ ನಿತ್ಯೋತ್ಸವ ಪ್ರಶಸ್ತಿ’ಗೆ ಗಾಯಕಿ ಶಶಿಕಲಾ ಸುನಿಲ್ ಸೇರಿ ಐವರು ಆಯ್ಕೆಯಾಗಿದ್ದಾರೆ.</p>.<p>ಕವಿ ಮಹಿಪಾಲ್ ರೆಡ್ಡಿ, ವೀಣಾ ಮ್ಯೂಸಿಕಲ್ಸ್ ಮಾಲೀಕ ಪಿ. ನಾಗರಾಜ್, ಕನ್ನಡ ಕಾರ್ಯಕರ್ತ ಜಾವಗಲ್ ಪ್ರಸನ್ನ ಕುಮಾರ್ ಹಾಗೂ ರಂಗಕರ್ಮಿ ಬೆಳ್ಳಿಚುಕ್ಕಿ ವೀರೇಂದ್ರ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇಲ್ಲಿನ ಗವಿಪುರದ ಗುಟ್ಟಹಳ್ಳಿಯಲ್ಲಿರುವ ಉದಯಭಾನು ಕಲಾಸಂಘದಲ್ಲಿ ಇದೇ ಭಾನುವಾರ ಸಂಜೆ 6 ಗಂಟೆಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದ್ದು, ಕಾಂಗ್ರೆಸ್ ಮುಖಂಡ ಬಿ.ಕೆ. ಚಂದ್ರಶೇಖರ್ ಅವರು ಸಮಾರಂಭ ಉದ್ಘಾಟಿಸಲಿದ್ದಾರೆ. ಬಸವನಗುಡಿ ಶಾಸಕ ಎಲ್.ಎ. ರವಿ ಸುಬ್ರಹ್ಮಣ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಅಕಾಡೆಮಿ ಅಧ್ಯಕ್ಷ ಕಿಕ್ಕೇರಿ ಕೃಷ್ಣಮೂರ್ತಿ ತಿಳಿಸಿದ್ದಾರೆ.</p>.<p>ಸಮಾರಂಭದಲ್ಲಿ ನಾಡಿನ ಖ್ಯಾತ ಕಲಾವಿದರಿಂದ ಸುಗಮ ಸಂಗೀತ ಗಾಯನ, ಎಚ್.ಬಿ. ಜಯರಾಂ, ರಾಘವೇಂದ್ರ ಜೋಶಿ, ಜೈಕುಮಾರ್ ತಂಡದಿಂದ ವಾದ್ಯ ವೈಭವ ಹಾಗೂ ಅಕಾಡೆಮಿಯ ಹಿರಿಯ ಮತ್ತು ಕಿರಿಯ ವಿದ್ಯಾರ್ಥಿಗಳಿಂದ ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಆದರ್ಶ ಸುಗಮ ಸಂಗೀತ ಅಕಾಡೆಮಿ ನೀಡುವ 2023ನೇ ಸಾಲಿನ ‘ಕನ್ನಡ ನಿತ್ಯೋತ್ಸವ ಪ್ರಶಸ್ತಿ’ಗೆ ಗಾಯಕಿ ಶಶಿಕಲಾ ಸುನಿಲ್ ಸೇರಿ ಐವರು ಆಯ್ಕೆಯಾಗಿದ್ದಾರೆ.</p>.<p>ಕವಿ ಮಹಿಪಾಲ್ ರೆಡ್ಡಿ, ವೀಣಾ ಮ್ಯೂಸಿಕಲ್ಸ್ ಮಾಲೀಕ ಪಿ. ನಾಗರಾಜ್, ಕನ್ನಡ ಕಾರ್ಯಕರ್ತ ಜಾವಗಲ್ ಪ್ರಸನ್ನ ಕುಮಾರ್ ಹಾಗೂ ರಂಗಕರ್ಮಿ ಬೆಳ್ಳಿಚುಕ್ಕಿ ವೀರೇಂದ್ರ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇಲ್ಲಿನ ಗವಿಪುರದ ಗುಟ್ಟಹಳ್ಳಿಯಲ್ಲಿರುವ ಉದಯಭಾನು ಕಲಾಸಂಘದಲ್ಲಿ ಇದೇ ಭಾನುವಾರ ಸಂಜೆ 6 ಗಂಟೆಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದ್ದು, ಕಾಂಗ್ರೆಸ್ ಮುಖಂಡ ಬಿ.ಕೆ. ಚಂದ್ರಶೇಖರ್ ಅವರು ಸಮಾರಂಭ ಉದ್ಘಾಟಿಸಲಿದ್ದಾರೆ. ಬಸವನಗುಡಿ ಶಾಸಕ ಎಲ್.ಎ. ರವಿ ಸುಬ್ರಹ್ಮಣ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಅಕಾಡೆಮಿ ಅಧ್ಯಕ್ಷ ಕಿಕ್ಕೇರಿ ಕೃಷ್ಣಮೂರ್ತಿ ತಿಳಿಸಿದ್ದಾರೆ.</p>.<p>ಸಮಾರಂಭದಲ್ಲಿ ನಾಡಿನ ಖ್ಯಾತ ಕಲಾವಿದರಿಂದ ಸುಗಮ ಸಂಗೀತ ಗಾಯನ, ಎಚ್.ಬಿ. ಜಯರಾಂ, ರಾಘವೇಂದ್ರ ಜೋಶಿ, ಜೈಕುಮಾರ್ ತಂಡದಿಂದ ವಾದ್ಯ ವೈಭವ ಹಾಗೂ ಅಕಾಡೆಮಿಯ ಹಿರಿಯ ಮತ್ತು ಕಿರಿಯ ವಿದ್ಯಾರ್ಥಿಗಳಿಂದ ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>