‘ಕನ್ನಡ ಪುಸ್ತಕ ನೀತಿ ಪುನರ್ ರಚನೆಗೆ ಪ್ರಾಧಿಕಾರವು ಸಾಹಿತಿ ನರಹಳ್ಳಿ ಬಾಲಸುಬ್ರಹ್ಮಣ್ಯ ಅವರ ಅಧ್ಯಕ್ಷತೆಯಲ್ಲಿ ಉಪ ಸಮಿತಿ ರಚಿಸಿದ್ದು, ಸಮಿತಿಯು ಅಂತಿಮ ಹಂತದ ಕರಡನ್ನು ಸಿದ್ಧಪಡಿಸುತ್ತಿದೆ. ನಾಡಿನ ಬರಹಗಾರರು, ಚಿಂತಕರು, ಓದುಗರು, ಪ್ರಕಾಶಕರು ಹಾಗೂ ಆಸಕ್ತ ಸಾರ್ವಜನಿಕರಿಂದ ಪುಸ್ತಕ ಲೋಕಕ್ಕೆ ಸಂಬಂಧಿಸಿದಂತೆ ಅನುಷ್ಠಾನ ಮಾಡಬಹುದಾದ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳನ್ನು ಪಡೆಯಲು ಈ ಸಮಿತಿಯು ನಿರ್ಧರಿಸಿದೆ’ ಎಂದು ಹೇಳಿದ್ದಾರೆ.