ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧ್ವಜಾರೋಹಣ ಕಡ್ಡಾಯವಾಗಲಿ: ಮೇಯರ್‌ ಎಂ.ಗೌತಮ್ ಕುಮಾರ್‌ ಅಭಿಮತ

Last Updated 2 ನವೆಂಬರ್ 2019, 6:51 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದ ಎಲ್ಲ ಖಾಸಗಿ ಶಾಲೆಗಳಲ್ಲೂ ಕನ್ನಡ ರಾಜ್ಯೋತ್ಸವ ದಿನದಂದು ಕಡ್ಡಾಯವಾಗಿ ಧ್ವಜಾರೋಹಣ ನಡೆಯಬೇಕು’ ಎಂದು ಮೇಯರ್‌ ಎಂ.ಗೌತಮ್ ಕುಮಾರ್‌ ಆಶಯ ವ್ಯಕ್ತಪಡಿಸಿದರು.

ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿ ಆಯೋಜಿಸಿದ್ದ ರಾಜ್ಯೋತ್ಸವ ಸಮಾರಂಭದಲ್ಲಿ ನಾಡ ವೈಭವ ಸಾರುವ ಕನ್ನಡ ಸಂಸ್ಕೃತಿ ಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಈ ಬಗ್ಗೆ ಮುಖ್ಯಮಂತ್ರಿ ಅವರ ಬಳಿ ಚರ್ಚಿಸಿ, ಮನವಿ ಪತ್ರ ಸಲ್ಲಿಸಿದ್ದೇನೆ. ಕನ್ನಡ ಮತ್ತು ಸಂಸ್ಕೃತಿ ಸಚಿವರಿಗೂ ಮನವಿ ಸಲ್ಲಿಸಲಾಗುವುದು’ ಎಂದರು.

ಇಂದಿನಿಂದ ಕನ್ನಡ ಫಲಕ ಕಡ್ಡಾಯ: ‘ಮೊದಲೇ ಹೇಳಿದಂತೆ ಇಂದಿನಿಂದ ಕನ್ನಡ ಫಲಕ ಹಾಕುವುದು ಕಡ್ಡಾಯ. ಕನ್ನಡ ಫಲಕ ಅಳವಡಿಸಿದವರಿಗೆ ಮಾತ್ರ ವ್ಯಾಪಾರಕ್ಕೆ ಪರವಾನಗಿ ನೀಡಲಾಗುವುದು. ಈ ನಿಯಮ ಯಶಸ್ವಿಯಾಗಲು ಕನ್ನಡಪರ ಸಂಘಟನೆಗಳ ಸಹಕಾರ ಬೇಕು. ಅಂಗಡಿ, ಮಳಿಗೆಗಳಿಗೆ ಕನ್ನಡ ಫಲಕ ಅಳವಡಿಸುವಂತೆ ಸಂಘಟನೆಗಳು ವ್ಯಾಪಾರಿಗಳಿಗೆ ಮನವರಿಕೆ ಮಾಡಬೇಕು’ ಎಂದು ಗೌತಮ್‌ ಕುಮಾರ್‌ ತಿಳಿಸಿದರು.

‘ಇಂದಿನಿಂದ ಕನ್ನಡ ಫಲಕ ಕಡ್ಡಾಯ’
‘ಮೊದಲೇ ಹೇಳಿದಂತೆ ಇಂದಿನಿಂದ ಕನ್ನಡ ಫಲಕ ಹಾಕುವುದು ಕಡ್ಡಾಯ. ಕನ್ನಡ ಫಲಕ ಅಳವಡಿಸಿದವರಿಗೆ ಮಾತ್ರ ವ್ಯಾಪಾರಕ್ಕೆ ಪರವಾನಗಿ ನೀಡಲಾಗುವುದು. ಈ ನಿಯಮ ಯಶಸ್ವಿಯಾಗಲು ಕನ್ನಡಪರ ಸಂಘಟನೆಗಳ ಸಹಕಾರ ಬೇಕು. ಅಂಗಡಿ ಮಳಿಗೆಗಳಿಗೆ ಕನ್ನಡ ಫಲಕ ಅಳವಡಿಸುವಂತೆ ಸಂಘಟನೆಗಳುವ್ಯಾಪಾರಿಗಳಿಗೆ ಮನವರಿಕೆ ಮಾಡಬೇಕು’ ಎಂದು ಗೌತಮ್‌ ಕುಮಾರ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT