ಮಹಾರಾಣಿ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕಿ ಎಂ.ಎಸ್.ಆಶಾದೇವಿ, ‘ಇತಿಹಾಸ ನೋಡುವ ದೃಷ್ಟಿಕೋನ ಬದಲಾದರೆ ಇತಿಹಾಸದ ವಿನ್ಯಾಸವೂ ಬದಲಾಗುತ್ತದೆ. ಅಡುಗೆಮನೆ ಲೋಕದಿಂದ ರಾಜಕಾರಣದ ಲೋಕಕ್ಕೆ ಕರೆತರುವ ಈ ಕೃತಿಯು ದಟ್ಟ ಸಾಂಸ್ಕೃತಿಕ ಲೋಕವನ್ನು ಕಟ್ಟಿಕೊಡುತ್ತದೆ. ಹೆಣ್ಣಿನ ಉತ್ಪಾದಕ ಶಕ್ತಿಯನ್ನು ಈ ಕೃತಿ ಹೊರಹಾಕುತ್ತದೆ’ ಎಂದರು.