<p><strong>ಬೆಂಗಳೂರು</strong>: ‘ಕನ್ನಡದ ಓದುಗರ ಪ್ರಪಂಚ ವಿಸ್ತಾರವಾಗಿಲ್ಲ ಹಾಗೂ ಗಂಭೀರವೂ ಆಗಿಲ್ಲ’ ಎಂದು ನವದೆಹಲಿಯ ಜೆಎನ್ಯು ನಿವೃತ್ತ ಕನ್ನಡ ಪ್ರಾಧ್ಯಾಪಕ ಡಾ.ಪುರುಷೋತ್ತಮ ಬಿಳಿಮಲೆ ವಿಷಾದಿಸಿದರು.</p>.<p>ನಗರದ ಸಂಕಥನದಿಂದ ಕರ್ನಾಟಕ ಚಿತ್ರಕಲಾ ಪರಿಷತ್ ಆವರಣದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಎಚ್.ಆರ್.ಸುಜಾತಾ ಅವರ ‘ಮಣಿಬಾಲೆ’ ಕೃತಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.</p>.<p>‘ಓದುಗರು ಮಾತ್ರವಲ್ಲ. ಕನ್ನಡ ಭಾಷೆ ಮಾತನಾಡುವವರ ಸಂಖ್ಯೆಯಲ್ಲೂ ಈಚೆಗೆ ಕಡಿಮೆ ಆಗುತ್ತಿದೆ. ಅದೇ ಹಿಂದಿ ಭಾಷೆ ಮಾತನಾಡುವವರ ಸಂಖ್ಯೆ ಶೇ 66ಕ್ಕೆ ಏರಿದೆ. ಕನ್ನಡದ ಬೆಳವಣಿಗೆ ಶೇ 3.75 ಮಾತ್ರ’ ಎಂದು ಆತಂಕ ವ್ಯಕ್ತಪಡಿಸಿದರು. </p>.<p>‘ರಾಜ್ಯದಲ್ಲಿ 30 ಸಾವಿರ ಕನ್ನಡ ಅಧ್ಯಾಪಕರಿದ್ದರೂ ಈಚಿನ ದಿನಗಳಲ್ಲಿ ಕನ್ನಡ ಕವನ ಸಂಗ್ರಹ ಪುಸ್ತಕಗಳ ಮಾರಾಟ ಮೂರು ನೂರು ದಾಟುತ್ತಿಲ್ಲ’ ಎಂದು ಹೇಳಿದರು.</p>.<p>ಮಹಾರಾಣಿ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕಿ ಎಂ.ಎಸ್.ಆಶಾದೇವಿ, ‘ಇತಿಹಾಸ ನೋಡುವ ದೃಷ್ಟಿಕೋನ ಬದಲಾದರೆ ಇತಿಹಾಸದ ವಿನ್ಯಾಸವೂ ಬದಲಾಗುತ್ತದೆ. ಅಡುಗೆಮನೆ ಲೋಕದಿಂದ ರಾಜಕಾರಣದ ಲೋಕಕ್ಕೆ ಕರೆತರುವ ಈ ಕೃತಿಯು ದಟ್ಟ ಸಾಂಸ್ಕೃತಿಕ ಲೋಕವನ್ನು ಕಟ್ಟಿಕೊಡುತ್ತದೆ. ಹೆಣ್ಣಿನ ಉತ್ಪಾದಕ ಶಕ್ತಿಯನ್ನು ಈ ಕೃತಿ ಹೊರಹಾಕುತ್ತದೆ’ ಎಂದರು.</p>.<p>ಪತ್ರಕರ್ತ ಜಿ.ಎನ್.ರಂಗನಾಥ ರಾವ್, ‘ಮಣಿಬಾಲೆ’ ಕೃತಿ ಗ್ರಾಮೀಣ ಸಂಸ್ಕೃತಿಯಲ್ಲಿ ವಿಶೇಷ ಪಯಣದ ಅನುಭವ ನೀಡುತ್ತದೆ ಎಂದರು.</p>.<p>ಲೇಖಕಿ ಎಚ್.ಆರ್.ಸುಜಾತಾ ಇದ್ದರು. ವಸುಂಧರಾ ಕದಲೂರು ನಿರೂಪಿಸಿದರು. ಎನ್.ಆರ್. ವಿಶುಕುಮಾರ್ ವಂದಿಸಿದರು. ಚಿಂತಾಮಣಿ ಜಿ.ಮುನಿರೆಡ್ಡಿ ತಂಡದವರಿಂದ ಜನಪದ ಗೀತಗಾಯನ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕನ್ನಡದ ಓದುಗರ ಪ್ರಪಂಚ ವಿಸ್ತಾರವಾಗಿಲ್ಲ ಹಾಗೂ ಗಂಭೀರವೂ ಆಗಿಲ್ಲ’ ಎಂದು ನವದೆಹಲಿಯ ಜೆಎನ್ಯು ನಿವೃತ್ತ ಕನ್ನಡ ಪ್ರಾಧ್ಯಾಪಕ ಡಾ.ಪುರುಷೋತ್ತಮ ಬಿಳಿಮಲೆ ವಿಷಾದಿಸಿದರು.</p>.<p>ನಗರದ ಸಂಕಥನದಿಂದ ಕರ್ನಾಟಕ ಚಿತ್ರಕಲಾ ಪರಿಷತ್ ಆವರಣದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಎಚ್.ಆರ್.ಸುಜಾತಾ ಅವರ ‘ಮಣಿಬಾಲೆ’ ಕೃತಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.</p>.<p>‘ಓದುಗರು ಮಾತ್ರವಲ್ಲ. ಕನ್ನಡ ಭಾಷೆ ಮಾತನಾಡುವವರ ಸಂಖ್ಯೆಯಲ್ಲೂ ಈಚೆಗೆ ಕಡಿಮೆ ಆಗುತ್ತಿದೆ. ಅದೇ ಹಿಂದಿ ಭಾಷೆ ಮಾತನಾಡುವವರ ಸಂಖ್ಯೆ ಶೇ 66ಕ್ಕೆ ಏರಿದೆ. ಕನ್ನಡದ ಬೆಳವಣಿಗೆ ಶೇ 3.75 ಮಾತ್ರ’ ಎಂದು ಆತಂಕ ವ್ಯಕ್ತಪಡಿಸಿದರು. </p>.<p>‘ರಾಜ್ಯದಲ್ಲಿ 30 ಸಾವಿರ ಕನ್ನಡ ಅಧ್ಯಾಪಕರಿದ್ದರೂ ಈಚಿನ ದಿನಗಳಲ್ಲಿ ಕನ್ನಡ ಕವನ ಸಂಗ್ರಹ ಪುಸ್ತಕಗಳ ಮಾರಾಟ ಮೂರು ನೂರು ದಾಟುತ್ತಿಲ್ಲ’ ಎಂದು ಹೇಳಿದರು.</p>.<p>ಮಹಾರಾಣಿ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕಿ ಎಂ.ಎಸ್.ಆಶಾದೇವಿ, ‘ಇತಿಹಾಸ ನೋಡುವ ದೃಷ್ಟಿಕೋನ ಬದಲಾದರೆ ಇತಿಹಾಸದ ವಿನ್ಯಾಸವೂ ಬದಲಾಗುತ್ತದೆ. ಅಡುಗೆಮನೆ ಲೋಕದಿಂದ ರಾಜಕಾರಣದ ಲೋಕಕ್ಕೆ ಕರೆತರುವ ಈ ಕೃತಿಯು ದಟ್ಟ ಸಾಂಸ್ಕೃತಿಕ ಲೋಕವನ್ನು ಕಟ್ಟಿಕೊಡುತ್ತದೆ. ಹೆಣ್ಣಿನ ಉತ್ಪಾದಕ ಶಕ್ತಿಯನ್ನು ಈ ಕೃತಿ ಹೊರಹಾಕುತ್ತದೆ’ ಎಂದರು.</p>.<p>ಪತ್ರಕರ್ತ ಜಿ.ಎನ್.ರಂಗನಾಥ ರಾವ್, ‘ಮಣಿಬಾಲೆ’ ಕೃತಿ ಗ್ರಾಮೀಣ ಸಂಸ್ಕೃತಿಯಲ್ಲಿ ವಿಶೇಷ ಪಯಣದ ಅನುಭವ ನೀಡುತ್ತದೆ ಎಂದರು.</p>.<p>ಲೇಖಕಿ ಎಚ್.ಆರ್.ಸುಜಾತಾ ಇದ್ದರು. ವಸುಂಧರಾ ಕದಲೂರು ನಿರೂಪಿಸಿದರು. ಎನ್.ಆರ್. ವಿಶುಕುಮಾರ್ ವಂದಿಸಿದರು. ಚಿಂತಾಮಣಿ ಜಿ.ಮುನಿರೆಡ್ಡಿ ತಂಡದವರಿಂದ ಜನಪದ ಗೀತಗಾಯನ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>