<p><strong>ಬೆಂಗಳೂರು:</strong> ‘ಸಾರ್ವಜನಿಕ ಜೀವನದಲ್ಲಿ ಪ್ರಮುಖ ಸ್ಥಾನಗಳಲ್ಲಿದ್ದರೂ ನಿಷ್ಕಳಂಕರಾಗಿ ಬಾಳಿದ ಜಿ.ಎಸ್. ಸಿದ್ದಲಿಂಗಯ್ಯ, ಕನ್ನಡ ಸಾಹಿತ್ಯ ಪರಿಷತ್ತಿಗೂ ನೈತಿಕ ಶಕ್ತಿ ತುಂಬಿದ್ದರು’ ಎಂದು ಅವರ ಒಡನಾಡಿಗಳು ಸ್ಮರಿಸಿಕೊಂಡರು. </p>.<p>ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ಪ್ರೊ.ಜಿ.ಎಸ್. ಸಿದ್ದಲಿಂಗಯ್ಯ ನುಡಿ ನಮನ’ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಪ್ರಮುಖರು ಮನದಾಳ ಹಂಚಿಕೊಂಡರು. </p>.<p>ಕಸಾಪ ಅಧ್ಯಕ್ಷ ಮಹೇಶ ಜೋಶಿ, ‘ಸಿದ್ದಲಿಂಗಯ್ಯ ಅವರು ಪರಿಷತ್ತಿನ ಅಧಿಕಾರ ವಹಿಸಿಕೊಂಡಾಗ, ಪರಿಷತ್ತು ಸಂದಿಗ್ಧ ಸನ್ನಿವೇಶದಲ್ಲಿತ್ತು. ಆ ಸಂದರ್ಭದಲ್ಲಿ ನುಡಿದಂತೆ ನಡೆದ ಅವರು, ತಮ್ಮ ಅವಧಿಯಲ್ಲಿ ಪರಿಷತ್ತಿಗೆ ಬಹುಮುಖ ಕೊಡುಗೆಗಳನ್ನು ನೀಡಿದರು. ಮಾರ್ಗದರ್ಶಕರಾಗಿದ್ದ ಅವರು, ಇತ್ತೀಚಿನವರೆಗೂ ಪರಿಷತ್ತಿನ ಏಳ್ಗೆಗೆ ಸಲಹೆಗಳನ್ನು ನೀಡುತ್ತಿದ್ದರು’ ಎಂದು ಸ್ಮರಿಸಿಕೊಂಡರು. </p>.<p>ನಿಡುಮಾಮಿಡಿ ಮಠದ ವೀರಭದ್ರ ಚನ್ನಮಲ್ಲ ಸ್ವಾಮೀಜಿ, ‘ಕಪಟತನ ಇರದ, ಆತ್ಮರತಿಗೆ ಒಳಗಾಗದ ಪರಿಶುದ್ಧ ವ್ಯಕ್ತಿತ್ವ ಅವರದಾಗಿತ್ತು. ಸಾರ್ವಜನಿಕ ಜೀವನದಲ್ಲಿ ಪ್ರಮುಖ ಸ್ಥಾನಗಳಲ್ಲಿದ್ದೂ, ನಿಷ್ಕಳಂಕವಾಗಿ ಬಾಳಿದ ಅಪರೂಪದ ವ್ಯಕ್ತಿ ಅವರು’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. </p>.<p>ಬೇಲಿಮಠದ ಶಿವರುದ್ರ ಸ್ವಾಮೀಜಿ, ‘ಎಲ್ಲರೊಂದಿಗೆ ಒಂದಾಗಿ, ಎಲ್ಲರಿಗೂ ಬೇಕಾಗಿ ಬಾಳಿದವರು ಸಿದ್ದಲಿಂಗಯ್ಯ’ ಎಂದರು. </p>.<p>ಜಾನಪದ ವಿದ್ವಾಂಸ ಗೊ.ರು.ಚನ್ನಬಸಪ್ಪ, ‘ಸಿದ್ದಲಿಂಗಯ್ಯ ಅವರಿಗೆ ಸಿಟ್ಟಿನಷ್ಟೇ ಸಂಯಮವೂ ಇತ್ತು’ ಎಂದು ಸ್ಮರಿಸಿಕೊಂಡರು.</p>.<p>ಕರ್ನಾಟಕ ನಾಟಕ ಅಕಾಡಮಿ ಅಧ್ಯಕ್ಷ ಕೆ.ವಿ.ನಾಗರಾಜಮೂರ್ತಿ, ಬರಹಗಾರರಾದ ಮಂಡಗದ್ದೆ ಶ್ರೀನಿವಾಸಯ್ಯ, ಕೆ.ಇ.ರಾಧಾಕೃಷ್ಣ, ತುಮಕೂರು ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ, ಬಿ.ಎಂ.ಶ್ರೀ. ಪ್ರತಿಷ್ಠಾನದ ಗೌರವಾಧ್ಯಕ್ಷ ಆರ್.ಲಕ್ಷ್ಮೀನಾರಾಯಣ, ಪ್ರಾಧ್ಯಾಪಕರಾದ ಕಾ.ವೆಂ.ಶ್ರೀನಿವಾಸಮೂರ್ತಿ ಹಾಗೂ ರುದ್ರೇಶ ಅದರಂಗಿ ಅವರು ಸಿದ್ದಲಿಂಗಯ್ಯ ಅವರ ಬಗ್ಗೆ ಅಭಿಪ್ರಾಯ ಹಂಚಿಕೊಂಡರು. </p>.<p>ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ನೇ.ಭ.ರಾಮಲಿಂಗಶೆಟ್ಟಿ, ಪದ್ಮಿನಿ ನಾಗರಾಜು, ಗೌರವ ಕೋಶಾಧ್ಯಕ್ಷ ಬಿ.ಎಂ.ಪಟೇಲ್ ಪಾಂಡು ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಸಾರ್ವಜನಿಕ ಜೀವನದಲ್ಲಿ ಪ್ರಮುಖ ಸ್ಥಾನಗಳಲ್ಲಿದ್ದರೂ ನಿಷ್ಕಳಂಕರಾಗಿ ಬಾಳಿದ ಜಿ.ಎಸ್. ಸಿದ್ದಲಿಂಗಯ್ಯ, ಕನ್ನಡ ಸಾಹಿತ್ಯ ಪರಿಷತ್ತಿಗೂ ನೈತಿಕ ಶಕ್ತಿ ತುಂಬಿದ್ದರು’ ಎಂದು ಅವರ ಒಡನಾಡಿಗಳು ಸ್ಮರಿಸಿಕೊಂಡರು. </p>.<p>ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ಪ್ರೊ.ಜಿ.ಎಸ್. ಸಿದ್ದಲಿಂಗಯ್ಯ ನುಡಿ ನಮನ’ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಪ್ರಮುಖರು ಮನದಾಳ ಹಂಚಿಕೊಂಡರು. </p>.<p>ಕಸಾಪ ಅಧ್ಯಕ್ಷ ಮಹೇಶ ಜೋಶಿ, ‘ಸಿದ್ದಲಿಂಗಯ್ಯ ಅವರು ಪರಿಷತ್ತಿನ ಅಧಿಕಾರ ವಹಿಸಿಕೊಂಡಾಗ, ಪರಿಷತ್ತು ಸಂದಿಗ್ಧ ಸನ್ನಿವೇಶದಲ್ಲಿತ್ತು. ಆ ಸಂದರ್ಭದಲ್ಲಿ ನುಡಿದಂತೆ ನಡೆದ ಅವರು, ತಮ್ಮ ಅವಧಿಯಲ್ಲಿ ಪರಿಷತ್ತಿಗೆ ಬಹುಮುಖ ಕೊಡುಗೆಗಳನ್ನು ನೀಡಿದರು. ಮಾರ್ಗದರ್ಶಕರಾಗಿದ್ದ ಅವರು, ಇತ್ತೀಚಿನವರೆಗೂ ಪರಿಷತ್ತಿನ ಏಳ್ಗೆಗೆ ಸಲಹೆಗಳನ್ನು ನೀಡುತ್ತಿದ್ದರು’ ಎಂದು ಸ್ಮರಿಸಿಕೊಂಡರು. </p>.<p>ನಿಡುಮಾಮಿಡಿ ಮಠದ ವೀರಭದ್ರ ಚನ್ನಮಲ್ಲ ಸ್ವಾಮೀಜಿ, ‘ಕಪಟತನ ಇರದ, ಆತ್ಮರತಿಗೆ ಒಳಗಾಗದ ಪರಿಶುದ್ಧ ವ್ಯಕ್ತಿತ್ವ ಅವರದಾಗಿತ್ತು. ಸಾರ್ವಜನಿಕ ಜೀವನದಲ್ಲಿ ಪ್ರಮುಖ ಸ್ಥಾನಗಳಲ್ಲಿದ್ದೂ, ನಿಷ್ಕಳಂಕವಾಗಿ ಬಾಳಿದ ಅಪರೂಪದ ವ್ಯಕ್ತಿ ಅವರು’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. </p>.<p>ಬೇಲಿಮಠದ ಶಿವರುದ್ರ ಸ್ವಾಮೀಜಿ, ‘ಎಲ್ಲರೊಂದಿಗೆ ಒಂದಾಗಿ, ಎಲ್ಲರಿಗೂ ಬೇಕಾಗಿ ಬಾಳಿದವರು ಸಿದ್ದಲಿಂಗಯ್ಯ’ ಎಂದರು. </p>.<p>ಜಾನಪದ ವಿದ್ವಾಂಸ ಗೊ.ರು.ಚನ್ನಬಸಪ್ಪ, ‘ಸಿದ್ದಲಿಂಗಯ್ಯ ಅವರಿಗೆ ಸಿಟ್ಟಿನಷ್ಟೇ ಸಂಯಮವೂ ಇತ್ತು’ ಎಂದು ಸ್ಮರಿಸಿಕೊಂಡರು.</p>.<p>ಕರ್ನಾಟಕ ನಾಟಕ ಅಕಾಡಮಿ ಅಧ್ಯಕ್ಷ ಕೆ.ವಿ.ನಾಗರಾಜಮೂರ್ತಿ, ಬರಹಗಾರರಾದ ಮಂಡಗದ್ದೆ ಶ್ರೀನಿವಾಸಯ್ಯ, ಕೆ.ಇ.ರಾಧಾಕೃಷ್ಣ, ತುಮಕೂರು ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ, ಬಿ.ಎಂ.ಶ್ರೀ. ಪ್ರತಿಷ್ಠಾನದ ಗೌರವಾಧ್ಯಕ್ಷ ಆರ್.ಲಕ್ಷ್ಮೀನಾರಾಯಣ, ಪ್ರಾಧ್ಯಾಪಕರಾದ ಕಾ.ವೆಂ.ಶ್ರೀನಿವಾಸಮೂರ್ತಿ ಹಾಗೂ ರುದ್ರೇಶ ಅದರಂಗಿ ಅವರು ಸಿದ್ದಲಿಂಗಯ್ಯ ಅವರ ಬಗ್ಗೆ ಅಭಿಪ್ರಾಯ ಹಂಚಿಕೊಂಡರು. </p>.<p>ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ನೇ.ಭ.ರಾಮಲಿಂಗಶೆಟ್ಟಿ, ಪದ್ಮಿನಿ ನಾಗರಾಜು, ಗೌರವ ಕೋಶಾಧ್ಯಕ್ಷ ಬಿ.ಎಂ.ಪಟೇಲ್ ಪಾಂಡು ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>