‘ಕನ್ನಡಿಗರು ಇಂದು ಎಲ್ಲಾ ಕ್ಷೇತ್ರಗಳಲ್ಲಿಯೂ ಬೆರಗು ಹುಟ್ಟಿಸುವಂತಹ ಸಾಧನೆ ಮಾಡಿದ್ದಾರೆ. ‘ಕನ್ನಡದ ಧ್ರುವತಾರೆ’ ಕಾರ್ಯಕ್ರಮದ ಮೂಲಕ ವಿವಿಧ ಕ್ಷೇತ್ರದಲ್ಲಿ ಅಗಣಿತ ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಲಾಗುತ್ತದೆ. ಸಂವಾದದ ಮೂಲಕ ಸಾಧಕರ ಅನುಭವಗಳನ್ನು ನಾಡಿನ ಜನರಿಗೆ ತಿಳಿಸುವ ಕೆಲಸ ಇದಾಗಿದೆ. ಈ ಕಾರ್ಯಕ್ರಮವನ್ನು ಪ್ರತಿ ತಿಂಗಳು ನಡೆಸಲಾಗುತ್ತದೆ’ ಎಂದು ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ.