ಅಂಧ ಬರಹಗಾರರನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಎಚ್.ವಿಶ್ವನಾಥ್ ಅವರು ಈ ಪುರಸ್ಕಾರವನ್ನು ಪರಿಷತ್ತಿನಲ್ಲಿ ಸ್ಥಾಪಿಸಿದ್ದಾರೆ. ರಮಾ ಫಣಿ ಭಟ್ ಗೋಪಿ ಅವರ ಬರಹಗಳು ವಿವಿಧ ದಿನ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ‘ಭಾವಲೋಕ’ ಮತ್ತು ‘ಆಕಾಶ ಬುಟ್ಟಿ’ ಅವರ ಪ್ರಕಟಿತ ಕವನ ಸಂಕಲನಗಳಾಗಿವೆ ಎಂದು ಪರಿಷತ್ತಿನ ಪ್ರಕಟಣಾ ವಿಭಾಗದ ಸಂಚಾಲಕ ಎನ್.ಎಸ್.ಶ್ರೀಧರ ಮೂರ್ತಿ ತಿಳಿಸಿದ್ದಾರೆ.