ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ನೇತೃತ್ವದಲ್ಲಿ ಈ ಆಯ್ಕೆ ನಡೆದಿದೆ. ಪ್ರಶಸ್ತಿಯು ₹ 35 ಸಾವಿರ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ರಾಷ್ಟ್ರೋತ್ಥಾನ ಸಾಹಿತ್ಯವು ಕಳೆದ 56 ವರ್ಷಗಳಿಂದ ಕೃತಿಗಳನ್ನು ಪ್ರಕಟಿಸುತ್ತಿದೆ. ಇದುವರೆಗೆ ಒಟ್ಟು 750 ಮೌಲಿಕ ಕೃತಿಗಳನ್ನು ಹೊರತಂದಿದೆ. ಸ್ವಾತಂತ್ರ್ಯ ಹೋರಾಟ, ದೇಶಭಕ್ತಿ, ಜೀವನ ಚರಿತ್ರೆ, ವ್ಯಕ್ತಿತ್ವ ವಿಕಸನ, ಧಾರ್ಮಿಕ, ಆಧ್ಯಾತ್ಮಿಕ, ಯೋಗ ಕುರಿತಾದ ಕೃತಿಗಳನ್ನು ಹೊರತಂದಿದೆ.