ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುಷ್ಪಾ, ಜಯಲಕ್ಷ್ಮಿಗೆ ‘ಸರೋಜಾದೇವಿ ಸಾಹಿತ್ಯ ಪ್ರಶಸ್ತಿ’

Published 2 ಜೂನ್ 2023, 22:54 IST
Last Updated 2 ಜೂನ್ 2023, 22:54 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಪದ್ಮಭೂಷಣ ಬಿ. ಸರೋಜಾದೇವಿ ಸಾಹಿತ್ಯ ಪ್ರಶಸ್ತಿ’ಗೆ ಲೇಖಕಿಯರಾದ ಪುಷ್ಪಾ ಅಯ್ಯಂಗಾರ್ ಹಾಗೂ ಜಯಲಕ್ಷ್ಮಿ ಪಾಟೀಲ ಆಯ್ಕೆಯಾಗಿದ್ದಾರೆ. 

ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ನೇತೃತ್ವದ ಸಮಿತಿ 2022 ಹಾಗೂ 2023ನೇ ಸಾಲಿಗೆ ಈ ಆಯ್ಕೆ ಮಾಡಿದೆ. ಪ್ರಶಸ್ತಿಯು ಫಲಕದ ಜೊತೆಗೆ ತಲಾ ₹ 15 ಸಾವಿರ ನಗದು ಒಳಗೊಂಡಿದೆ. ಬಿ. ಸರೋಜಾದೇವಿ ಅವರು ಪುತ್ರಿ ಬಿ. ಭುವನೇಶ್ವರಿ ಅವರ ಸ್ಮರಣಾರ್ಥ ದತ್ತಿ ನಿಧಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸ್ಥಾಪಿಸಿದ್ದಾರೆ. 

ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡುತ್ತಿರುವ ಮಹಿಳಾ ಸಾಹಿತಿಗಳಿಗೆ ಈ ಪ್ರಶಸ್ತಿಯನ್ನು ದತ್ತಿ ದಾನಿಗಳು ಮೀಸಲಿಟ್ಟಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. 

ಜಯಲಕ್ಷ್ಮಿ ಪಾಟೀಲ
ಜಯಲಕ್ಷ್ಮಿ ಪಾಟೀಲ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT