‘ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಭುವನಗಿರಿಯ ಭುವನೇಶ್ವರಿಯ ದೇಗುಲದ ನಿರ್ಮಾಣ ಕಾರ್ಯವು ಕದಂಬರ ಕಾಲದಲ್ಲಿ ಆರಂಭವಾಗಿ, ಕ್ರಿ.ಶ. 1692ರಲ್ಲಿ ಬೀಳಗಿ ಅರಸರ ಕೊನೆಯ ದೊರೆ ಬಸವೇಂದ್ರನ ಕಾಲದಲ್ಲಿ ಪೂರ್ಣಗೊಂಡಿತು. ಇದು ಕನ್ನಡ ನಾಡಿನಲ್ಲಿ ಸ್ಥಾಪನೆಗೊಂಡ ಮೊದಲ ಭುವನೇಶ್ವರಿಯ ದೇಗುಲ. ಕನ್ನಡದ ಕುಲಪುರೋಹಿತ ಆಲೂರು ವೆಂಕಟರಾಯರು ತಮ್ಮ ‘ಕರ್ನಾಟಕ ಗತ ವೈಭವ’ ಕೃತಿಯಲ್ಲಿ ‘ಭುವನೇಶ್ವರಿ ಕನ್ನಡಿಗರ ತಾಯಿ’ ಎನ್ನುವ ಪರಿಕಲ್ಪನೆ ನೀಡಿದರು. ಅದಕ್ಕೆ ಬಿ.ಎಂ.ಶ್ರೀ., ಕುವೆಂಪು, ಬೇಂದ್ರೆ ಮೊದಲಾದ ಕವಿವರ್ಯರು ಧ್ವನಿಗೂಡಿಸಿದರು’ ಎಂದು ಹೇಳಿದ್ದಾರೆ.