<p><strong>ಬೆಂಗಳೂರು:</strong> ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ಭಾರತೀಯ ಮಹಾ ಲೇಖಪಾಲರಿಂದ (ಸಿಎಜಿ) ಲೆಕ್ಕ ಪರಿಶೋಧನೆ ನಡೆಸಲು ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನಿರ್ಧರಿಸಿದೆ. </p>.<p>ಜಮಖಂಡಿಯಲ್ಲಿ ನಡೆದ ಕಾರ್ಯಕಾರಿ ಸಮಿತಿಯ ತೀರ್ಮಾನಂತೆ ಈ ಬಗ್ಗೆ ಪರಿಷತ್ತು ಕ್ರಮ ಕೈಗೊಂಡಿದೆ. ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಎಲ್ಲ ಖರ್ಚು–ವೆಚ್ಚಗಳು, 2023–24ನೇ ಸಾಲಿನಲ್ಲಿ ಕಸಾಪ ನಡೆಸಿದ ಹಣಕಾಸಿನ ವ್ಯವಹಾರದ ಬಗ್ಗೆ ಲೆಕ್ಕ ಪರಿಶೋಧನೆ ನಡೆಸಲಾಗುತ್ತದೆ. ಈ ಸಂಬಂಧ ಭಾರತೀಯ ಮಹಾ ಲೇಖಪಾಲರಿಗೆ ಪತ್ರ ಬರೆಯಲಾಗಿದೆ ಎಂದು ಕಸಾಪ ಮಾಧ್ಯಮ ವಿಭಾಗದ ಸಂಚಾಲಕ ಎನ್.ಎಸ್.ಶ್ರೀಧರ ಮೂರ್ತಿ ತಿಳಿಸಿದ್ದಾರೆ.</p>.<p>ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜತೆಗೂ ಚರ್ಚಿಸಿ ಅವರ ಒಪ್ಪಿಗೆ ಪಡೆಯಲಾಗಿದೆ. ಶೀಘ್ರವೇ ಲೆಕ್ಕ ಪರಿಶೋಧನೆ ನಡೆಯುವ ಸಾಧ್ಯತೆಯಿದೆ. ಈ ಲೆಕ್ಕ ಪರಿಶೋಧನೆಯಿಂದ ಆರ್ಥಿಕ ಪಾರದರ್ಶಕತೆಯನ್ನು ಪಡೆದು, ಪರಿಶುದ್ಧತೆಯ ಉನ್ನತ ಪರಂಪರೆಯನ್ನು ಮಂದುವರಿಸಲು ಕಾರ್ಯಕಾರಿಣಿ ತೀರ್ಮಾನಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ಭಾರತೀಯ ಮಹಾ ಲೇಖಪಾಲರಿಂದ (ಸಿಎಜಿ) ಲೆಕ್ಕ ಪರಿಶೋಧನೆ ನಡೆಸಲು ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನಿರ್ಧರಿಸಿದೆ. </p>.<p>ಜಮಖಂಡಿಯಲ್ಲಿ ನಡೆದ ಕಾರ್ಯಕಾರಿ ಸಮಿತಿಯ ತೀರ್ಮಾನಂತೆ ಈ ಬಗ್ಗೆ ಪರಿಷತ್ತು ಕ್ರಮ ಕೈಗೊಂಡಿದೆ. ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಎಲ್ಲ ಖರ್ಚು–ವೆಚ್ಚಗಳು, 2023–24ನೇ ಸಾಲಿನಲ್ಲಿ ಕಸಾಪ ನಡೆಸಿದ ಹಣಕಾಸಿನ ವ್ಯವಹಾರದ ಬಗ್ಗೆ ಲೆಕ್ಕ ಪರಿಶೋಧನೆ ನಡೆಸಲಾಗುತ್ತದೆ. ಈ ಸಂಬಂಧ ಭಾರತೀಯ ಮಹಾ ಲೇಖಪಾಲರಿಗೆ ಪತ್ರ ಬರೆಯಲಾಗಿದೆ ಎಂದು ಕಸಾಪ ಮಾಧ್ಯಮ ವಿಭಾಗದ ಸಂಚಾಲಕ ಎನ್.ಎಸ್.ಶ್ರೀಧರ ಮೂರ್ತಿ ತಿಳಿಸಿದ್ದಾರೆ.</p>.<p>ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜತೆಗೂ ಚರ್ಚಿಸಿ ಅವರ ಒಪ್ಪಿಗೆ ಪಡೆಯಲಾಗಿದೆ. ಶೀಘ್ರವೇ ಲೆಕ್ಕ ಪರಿಶೋಧನೆ ನಡೆಯುವ ಸಾಧ್ಯತೆಯಿದೆ. ಈ ಲೆಕ್ಕ ಪರಿಶೋಧನೆಯಿಂದ ಆರ್ಥಿಕ ಪಾರದರ್ಶಕತೆಯನ್ನು ಪಡೆದು, ಪರಿಶುದ್ಧತೆಯ ಉನ್ನತ ಪರಂಪರೆಯನ್ನು ಮಂದುವರಿಸಲು ಕಾರ್ಯಕಾರಿಣಿ ತೀರ್ಮಾನಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>