ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಸಾಪ: ಮನೆ ಮನೆಗೆ ಭೇಟಿ ಅಭಿಯಾನ

Last Updated 27 ಮೇ 2022, 21:15 IST
ಅಕ್ಷರ ಗಾತ್ರ

ಬೆಂಗಳೂರು: ಹಾವೇರಿಯಲ್ಲಿ ನಡೆಯ ಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಅಧ್ಯಕ್ಷ ಮಹೇಶ ಜೋಶಿ ಮನೆ ಮನೆಗೆ ಭೇಟಿ ಅಭಿಯಾನ ಹಮ್ಮಿಕೊಂಡಿದ್ದಾರೆ.

‘ಸಾಹಿತ್ಯಸಮ್ಮೇಳನವನ್ನು ಪರಿಷತ್ತು ಮತ್ತು ಸರ್ಕಾರ ಮಾತ್ರ ಆಚರಿಸುವುದಲ್ಲ. ಸಮಸ್ತ ಕನ್ನಡಿಗರೂ ಕನ್ನಡಿಗರ ಹಬ್ಬ ಎಂಬ ಭಾವನೆಯಿಂದ ಒಗ್ಗಟ್ಟಿನಿಂದ ಆಚರಿಸಬೇಕು. ಅರ್ಥಪೂರ್ಣ ಗೋ ಷ್ಠಿಗಳು,ಔಚಿತ್ಯಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ನುಡಿಜಾತ್ರೆಯನ್ನು ಅತ್ಯಂತ ಯಶಸ್ವಿಯಾಗಿ ನಡೆಸಬೇಕು. ಹೀಗಾಗಿ, ಎಲ್ಲರ ಸಲಹೆ-ಸೂಚನೆಗಳನ್ನು ಸ್ವೀಕರಿಸಲು, ಸಹಕಾರವನ್ನು ಪಡೆಯಲು ಪರಿ ಷತ್ತಿನ ಅಧ್ಯಕ್ಷರುರಾಜ್ಯದಾದ್ಯಂತ ಜನ ಸಾಮಾನ್ಯರ, ಗಣ್ಯರ, ವಿವಿಧ ಕ್ಷೇತ್ರಗಳಲ್ಲಿ ಸಾಧನಗೈದ ಮಹನೀಯರುಗಳ ಮನೆಗೆ ಭೇಟಿ ನೀಡಲಿದ್ದಾರೆ’ ಎಂದು ಪರಿಷತ್ತಿನಗೌರವ ಕಾರ್ಯದರ್ಶಿನೇ.ಭ. ರಾಮಲಿಂಗಶೆಟ್ಟಿ ಅವರು ತಿಳಿಸಿದ್ದಾರೆ.

‘ಕನ್ನಡಾಭಿಮಾನಿಗಳು ತಮ್ಮ ಮನೆಯಲ್ಲಿ ಪರಿಷತ್ತಿನ ಅಧ್ಯಕ್ಷರನ್ನು ಭೇಟಿಯಾಗಲುಜೂ.30ರೊಳಗೆ ಪರಿಷತ್ತಿನಲ್ಲಿ ವಿಳಾಸ ಸಹಿತ ತಮ್ಮಹೆಸರನ್ನು ನೋಂದಾಯಿಸಿಕೊಳ್ಳಬೇಕು’ ಎಂದು ಪ್ರಕಟಣೆ ತಿಳಿಸಿದೆ.

ಸಂಪರ್ಕ ಸಂಖ್ಯೆ:080-26612991, 26623584

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT