ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮನು ಬಳಿಗಾರ, ‘2021ರ ಮಾರ್ಚ್ 3ಕ್ಕೆ ನಮ್ಮ ಕಾರ್ಯಕಾರಿ ಸಮಿತಿಯ ಅಧಿಕಾರದ ಅವಧಿ ಮುಕ್ತಾಯವಾಗಲಿದೆ. ನಿಬಂಧನೆಯ ಪ್ರಕಾರ ಮುಂದಿನ ಕಾರ್ಯಕಾರಿ ಸಮಿತಿ ಅಸ್ತಿತ್ವಕ್ಕೆ ಬರುವವರೆಗೂ ಈಗಿನ ಕಾರ್ಯಕಾರಿ ಸಮಿತಿಯೇ ಮುಂದುವರಿಯಲಿದೆ. ಅವಧಿ ಮುಗಿಯುವ ಮೂರು ತಿಂಗಳ ಮೊದಲು ಸರ್ಕಾರಕ್ಕೆ ಚುನಾವಣೆ ನಡೆಸುವ ಸಂಬಂಧ ಪತ್ರ ಬರೆಯಬೇಕು. ಅದರ ಅನುಸಾರ ಡಿಸೆಂಬರ್ 3ಕ್ಕಿಂತ ಮೊದಲು ಸರ್ಕಾರಕ್ಕೆ ಪತ್ರ ಬರೆಯುತ್ತೇನೆ’ ಎಂದಿದ್ದಾರೆ.