ಕನ್ನಡ ಕಾರ್ಯಕ್ರಮಗಳು ಹೆಚ್ಚಾಗಲು, ಎಲ್ಲ ಕನ್ನಡಿಗರೂ ಕಾರ್ಯಕ್ರಮಗಳನ್ನು ರೂಪಿಸಲು ನೆರವಾಗಲು ಕನ್ನಡ ಸಾಹಿತ್ಯ ಪರಿಷತ್ತು ಉದ್ದೇಶಿಸಿದೆ. ಕುವೆಂಪು ಸಭಾಂಗಣವು ಸಂಪೂರ್ಣ ನವೀಕರಣಗೊಂಡಿದ್ದು, ಪರಂಪರೆಯ ಹಿರಿಮೆ ಮತ್ತು ಆಧುನಿಕತೆಯ ಅಗತ್ಯ ಎರಡನ್ನೂ ಒಳಗೊಂಡ ಹೊಸತನವನ್ನು ಪಡೆದುಕೊಂಡಿದೆ. ಕನ್ನಡ ಸಾಂಸ್ಕೃತಿಕ ಲೋಕವನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಸಾಧ್ಯವಾದಷ್ಟು ಕಡಿಮೆ ಬೆಲೆ ನಿಗದಿಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.