‘ಕನ್ನಡ ಶಾಲೆಗಳನ್ನು ಉಳಿಸಿ ಕನ್ನಡ ಭಾಷೆಯನ್ನು ಬೆಳೆಸಬೇಕು ಎನ್ನುವ ಮೂಲ ಧ್ಯೇಯವನ್ನು ಹೊಂದಿರುವ ಪರಿಷತ್ತು, ಕನ್ನಡ ಶಾಲೆಗಳ ಮುಚ್ಚುವಿಕೆಯನ್ನು ಸಹಿಸುವುದಿಲ್ಲ. ಸರ್ಕಾರವು ಕನ್ನಡ ಶಾಲೆಗಳ ಬಗ್ಗೆ ಅಸಡ್ಡೆ ತೋರುವುದು ಆಗಾಗ ಕಂಡುಬರುತ್ತಿದೆ. ಚಿಕ್ಕಪೇಟೆಯಲ್ಲಿ 1945ರಲ್ಲಿ ಆರಂಭವಾದ ಸರ್ಕಾರಿ ಪ್ರೌಢಶಾಲೆಯನ್ನು ಶಿಕ್ಷಣ ಇಲಾಖೆಯ ತಕರಾರಿನ ಮಧ್ಯೆಯೂ ಜಿಲ್ಲಾಡಳಿತ ಮುಚ್ಚಲು ಹೊರಟಿರುವುದು ಅಕ್ಷಮ್ಯ. ಸ್ವಾತಂತ್ರ್ಯಪೂರ್ವದ ಶಾಲೆಯನ್ನು ಕಟ್ಟಡ ಸಮೇತ ಮಾರಾಟ ಮಾಡಿ, ಪರಭಾರೆ ಮಾಡಿದ್ದನ್ನು ಯಾವೊಬ್ಬ ಕನ್ನಡಿಗನೂ ಸಹಿಸಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.