‘ನಮ್ಮ ದೇಶದಲ್ಲಿ ಸ್ವಾತಂತ್ರ್ಯೋತ್ಸವ ಮತ್ತು ಗಣರಾಜ್ಯೋತ್ಸವಗಳೆರಡೂ ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ದಿನಗಳಾಗಿವೆ. ಸಮೀಕ್ಷೆಯೊಂದರ ಪ್ರಕಾರ ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇ 2ರಷ್ಟು ಜನರು ಮಾತ್ರ ಗಣರಾಜ್ಯೋತ್ಸವಕ್ಕಿಂತ ಮುಂಚೆ ಹುಟ್ಟಿದವರಾಗಿದ್ದಾರೆ. ಇದರಿಂದಾಗಿ ಹೆಚ್ಚಿನ ಜನರಿಗೆ ಸಂವಿಧಾನದ ಮಹತ್ವ ತಿಳಿದಿಲ್ಲ. ದೇಶದ ಆಡಳಿತವು ಸಂವಿಧಾನಕ್ಕೆ ತಕ್ಕಂತೆಯೇ ಇರಬೇಕೆಂದು ಕೇಶವಾನಂದ ಭಾರತಿ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಹೇಳಿದೆ’ ಎಂದರು.