<p><strong>ಬೆಂಗಳೂರು</strong>: ‘ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಆಡಳಿತ ಪಾರದರ್ಶಕವಾಗಿದೆ. ದಾಖಲೆಗಳು ನಿಖರವಾಗಿದ್ದು, ಯಾವುದೇ ರೀತಿಯ ತನಿಖೆಗೆ ಸದಾ ಸಿದ್ದ’ ಎಂದು ಕಸಾಪ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ. </p>.<p>‘ಹೈಕೋರ್ಟ್ ಆದೇಶದಂತೆ ಇದೇ 5 ರಂದು ವಾರ್ಷಿಕ ಸಾಮಾನ್ಯ ಸಭೆ ನಡೆಸಿ, ಅಲ್ಲಿ ಕಾನೂನಾತ್ಮಕ ನಿರ್ಣಯಗಳನ್ನು ತೆಗೆದುಕೊಳ್ಳಲಾಗುತ್ತದೆ. ಈ ಬಗ್ಗೆ ವರದಿಯನ್ನು ಇದೇ 14ರಂದು ಹೈಕೋರ್ಟ್ಗೆ ಸಲ್ಲಿಸಲಾಗುತ್ತದೆ. ಅಲ್ಲಿಯವರೆಗೆ ಸರ್ಕಾರವು ಕಸಾಪ ಅಧ್ಯಕ್ಷರ ವಿರುದ್ಧ ಕ್ರಮ ತೆಗೆದುಕೊಳ್ಳದೆ, ತನ್ನ ನಿಲುವನ್ನು ವರದಿಯ ಮೂಲಕ ತಿಳಿಸಬೇಕೆಂದು ಕೋರ್ಟ್ ನಿರ್ದೇಶಿಸಿದೆ. ಈ ನಡುವೆ ಕಸಾಪ ವಿರುದ್ಧ ಉದ್ದೇಶ ಪೂರ್ವಕವಾಗಿ ತಪ್ಪು ಮಾಹಿತಿಗಳನ್ನು ಹರಿಬಿಡಲಾಗುತ್ತಿದೆ’ ಎಂದು ಹೇಳಿದ್ದಾರೆ. </p>.<p>‘ತನಿಖೆಗಳ ಮೂಲಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಲುವು ಇನ್ನಷ್ಟು ಸ್ಪಷ್ಟವಾಗಲಿದ್ದು. ಕಳಂಕರಹಿತವಾಗಿ ಹೊರ ಬರಲು ಇದೊಂದು ಸದಾವಕಾಶವೆಂದು ಭಾವಿಸಿ ಮುನ್ನಡೆಯಲಾಗುತ್ತದೆ’ ಎಂದು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಆಡಳಿತ ಪಾರದರ್ಶಕವಾಗಿದೆ. ದಾಖಲೆಗಳು ನಿಖರವಾಗಿದ್ದು, ಯಾವುದೇ ರೀತಿಯ ತನಿಖೆಗೆ ಸದಾ ಸಿದ್ದ’ ಎಂದು ಕಸಾಪ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ. </p>.<p>‘ಹೈಕೋರ್ಟ್ ಆದೇಶದಂತೆ ಇದೇ 5 ರಂದು ವಾರ್ಷಿಕ ಸಾಮಾನ್ಯ ಸಭೆ ನಡೆಸಿ, ಅಲ್ಲಿ ಕಾನೂನಾತ್ಮಕ ನಿರ್ಣಯಗಳನ್ನು ತೆಗೆದುಕೊಳ್ಳಲಾಗುತ್ತದೆ. ಈ ಬಗ್ಗೆ ವರದಿಯನ್ನು ಇದೇ 14ರಂದು ಹೈಕೋರ್ಟ್ಗೆ ಸಲ್ಲಿಸಲಾಗುತ್ತದೆ. ಅಲ್ಲಿಯವರೆಗೆ ಸರ್ಕಾರವು ಕಸಾಪ ಅಧ್ಯಕ್ಷರ ವಿರುದ್ಧ ಕ್ರಮ ತೆಗೆದುಕೊಳ್ಳದೆ, ತನ್ನ ನಿಲುವನ್ನು ವರದಿಯ ಮೂಲಕ ತಿಳಿಸಬೇಕೆಂದು ಕೋರ್ಟ್ ನಿರ್ದೇಶಿಸಿದೆ. ಈ ನಡುವೆ ಕಸಾಪ ವಿರುದ್ಧ ಉದ್ದೇಶ ಪೂರ್ವಕವಾಗಿ ತಪ್ಪು ಮಾಹಿತಿಗಳನ್ನು ಹರಿಬಿಡಲಾಗುತ್ತಿದೆ’ ಎಂದು ಹೇಳಿದ್ದಾರೆ. </p>.<p>‘ತನಿಖೆಗಳ ಮೂಲಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಲುವು ಇನ್ನಷ್ಟು ಸ್ಪಷ್ಟವಾಗಲಿದ್ದು. ಕಳಂಕರಹಿತವಾಗಿ ಹೊರ ಬರಲು ಇದೊಂದು ಸದಾವಕಾಶವೆಂದು ಭಾವಿಸಿ ಮುನ್ನಡೆಯಲಾಗುತ್ತದೆ’ ಎಂದು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>