<p><strong>ಬೆಂಗಳೂರು</strong>: ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಅಧ್ಯಕ್ಷ ಮಹೇಶ ಜೋಶಿ ಅವರ ಆಡಳಿತ ವೈಖರಿ ವಿರೋಧಿಸಿ ಕಸಾಪ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ನೇ.ಭ. ರಾಮಲಿಂಗ ಶೆಟ್ಟಿ ರಾಜೀನಾಮೆ ನೀಡಿದ್ದಾರೆ.</p>.<p>ಗೌರವ ಕಾರ್ಯದರ್ಶಿಯಾಗಿದ್ದ ಪದ್ಮಿನಿ ನಾಗರಾಜು ಅವರು ಕಳೆದ ವಾರ ರಾಜೀನಾಮೆ ನೀಡಿದ್ದರು. ಮತ್ತೊಬ್ಬ ಗೌರವ ಕಾರ್ಯದರ್ಶಿ ರಾಮಲಿಂಗ ಶೆಟ್ಟಿ ಅವರೂ ಈಗ ರಾಜೀನಾಮೆ ನೀಡಿದ್ದಾರೆ. ನಾಲ್ಕು ಪುಟಗಳ ರಾಜೀನಾಮೆ ಪತ್ರದಲ್ಲಿ ಮಹೇಶ ಜೋಶಿ ಅವರ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ಗೌರವ ಕಾರ್ಯದರ್ಶಿ ಹುದ್ದೆಗೆ ನೇಮಕಗೊಂಡಾಗಿನಿಂದ ವಿನಾಕಾರಣ ನಿಂದನೆ, ಬೆದರಿಕೆ ಎದುರಿಸಿದ್ದೇನೆ. ದರ್ಪ, ದೌರ್ಜನ್ಯದ ನಡೆಯಿಂದ ಹಲವು ಬಾರಿ ಹೊರ ಹೋಗಲು ಬಯಸಿದ್ದೆ. ಪದಾಧಿಕಾರಿಗಳ ಸಾಂತ್ವನ, ಕಸಾಪದ ಮೇಲಿನ ಅಭಿಮಾನದಿಂದ ಮುಂದುವರಿದಿದ್ದೆ’ ಎಂದು ತಿಳಿಸಿದ್ದಾರೆ.</p>.<p>‘ಮಹೇಶ ಜೋಶಿ ಅವರ ಜತೆಗೆ ಕೆಲಸ ಮಾಡಿದ್ದು ಕಹಿ ಘಟನೆಯೂ ಹೌದು. ಅವರಿಗೆ ದುರಹಂಕಾರವಿದ್ದು, ಸರ್ವಾಧಿಕಾರಿಯಂತೆ ವರ್ತಿಸುತ್ತಾರೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಅಧ್ಯಕ್ಷ ಮಹೇಶ ಜೋಶಿ ಅವರ ಆಡಳಿತ ವೈಖರಿ ವಿರೋಧಿಸಿ ಕಸಾಪ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ನೇ.ಭ. ರಾಮಲಿಂಗ ಶೆಟ್ಟಿ ರಾಜೀನಾಮೆ ನೀಡಿದ್ದಾರೆ.</p>.<p>ಗೌರವ ಕಾರ್ಯದರ್ಶಿಯಾಗಿದ್ದ ಪದ್ಮಿನಿ ನಾಗರಾಜು ಅವರು ಕಳೆದ ವಾರ ರಾಜೀನಾಮೆ ನೀಡಿದ್ದರು. ಮತ್ತೊಬ್ಬ ಗೌರವ ಕಾರ್ಯದರ್ಶಿ ರಾಮಲಿಂಗ ಶೆಟ್ಟಿ ಅವರೂ ಈಗ ರಾಜೀನಾಮೆ ನೀಡಿದ್ದಾರೆ. ನಾಲ್ಕು ಪುಟಗಳ ರಾಜೀನಾಮೆ ಪತ್ರದಲ್ಲಿ ಮಹೇಶ ಜೋಶಿ ಅವರ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ಗೌರವ ಕಾರ್ಯದರ್ಶಿ ಹುದ್ದೆಗೆ ನೇಮಕಗೊಂಡಾಗಿನಿಂದ ವಿನಾಕಾರಣ ನಿಂದನೆ, ಬೆದರಿಕೆ ಎದುರಿಸಿದ್ದೇನೆ. ದರ್ಪ, ದೌರ್ಜನ್ಯದ ನಡೆಯಿಂದ ಹಲವು ಬಾರಿ ಹೊರ ಹೋಗಲು ಬಯಸಿದ್ದೆ. ಪದಾಧಿಕಾರಿಗಳ ಸಾಂತ್ವನ, ಕಸಾಪದ ಮೇಲಿನ ಅಭಿಮಾನದಿಂದ ಮುಂದುವರಿದಿದ್ದೆ’ ಎಂದು ತಿಳಿಸಿದ್ದಾರೆ.</p>.<p>‘ಮಹೇಶ ಜೋಶಿ ಅವರ ಜತೆಗೆ ಕೆಲಸ ಮಾಡಿದ್ದು ಕಹಿ ಘಟನೆಯೂ ಹೌದು. ಅವರಿಗೆ ದುರಹಂಕಾರವಿದ್ದು, ಸರ್ವಾಧಿಕಾರಿಯಂತೆ ವರ್ತಿಸುತ್ತಾರೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>