ಮುಖ್ಯಮಂತ್ರಿ ಅವರನ್ನು ಶುಕ್ರವಾರ ಭೇಟಿ ಮಾಡಿ, ಮನವಿ ಪತ್ರ ಸಲ್ಲಿಸಿದರು. ‘ಉಳಿದ ರಾಜ್ಯಗಳಿಗೆ ಮಾದರಿಯಾಗುವ ರೀತಿಯಲ್ಲಿ ರಾಜ್ಯ ಸರ್ಕಾರ ತಂತ್ರಜ್ಞಾನವನ್ನು ಆಡಳಿತದಲ್ಲಿ ಅಳವಡಿಸಿಕೊಂಡಿದೆ. ಅದೇ ರೀತಿ, ಇಲ್ಲಿನ ಭಾಷೆಯನ್ನು ಕೂಡ ಬಳಸುವ ಮೂಲಕ ಕನ್ನಡಕ್ಕೆ ವಿಶ್ವಮಾನ್ಯತೆ ದೊರಕಿಸಿಕೊಡಬೇಕಾಗಿದೆ. ‘ಕರ್ನಾಟಕ.ಭಾರತ’ ಎಂಬ ವೆಬ್ ವಿಳಾಸವನ್ನು ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ಬಳಕೆಗಾಗಿಯೇ ಮೀಸಲಿಟ್ಟಿದೆ. ಹಾಗಾಗಿ ಇದನ್ನು ಪಡೆ ಯುವಂತೆ ಇ–ಆಡಳಿತ ಇಲಾಖೆಗೆ ಸೂಚಿಸಬೇಕು’ ಎಂದು ಮನವಿ ಮಾಡಿಕೊಂಡರು.