<p><strong>ಕೆ.ಆರ್.ಪುರ:</strong> ಪೂರ್ವ ತಾಲ್ಲೂಕಿನ ಕನ್ನಮಂಗಲ ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನು ಪದಚ್ಯುತಿಗೊಳಿಸಲಾಗಿದೆ.</p>.<p>ಗ್ರಾಮ ಪಂಚಾಯಿತಿ ಸದಸ್ಯರು ಮಂಡಿಸಿದ್ದ ಅವಿಶ್ವಾಸ ಗೊತ್ತುವಳಿಗೆ, 16 ಸದಸ್ಯರ ಪೈಕಿ 12 ಸದಸ್ಯರ ಮತಗಳು ಬಂದವು. ಉಪ ವಿಭಾಗಾಧಿಕಾರಿ ಕಿರಣ್ ನೇತೃತ್ವದಲ್ಲಿ ಅವಿಶ್ವಾಸ ಗೊತ್ತುವಳಿ ಸಭೆ ಮಂಗಳವಾರ ನಡೆಯಿತು.</p>.<p>ಅಧ್ಯಕ್ಷೆ ಪವಿತ್ರಾ ರವಿ ಸೇರಿ ನಾಲ್ಕು ಸದಸ್ಯರು ಸಭೆಗೆ ಗೈರಾಗಿದ್ದರು. ಅವಿಶ್ವಾಸ ನಿರ್ಣಯದಿಂದ ಅಧ್ಯಕ್ಷರು ಸ್ಥಾನದಿಂದ ಪದಚ್ಯುತಗೊಂಡಿದ್ದಾರೆ. ನೂತನ ಅಧ್ಯಕ್ಷರ ಆಯ್ಕೆಗೆ ಸದ್ಯದಲ್ಲೇ ದಿನಾಂಕ ನಿಗದಿಪಡಿಸುವುದಾಗಿ ಉಪ ವಿಭಾಗಾಧಿಕಾರಿ ತಿಳಿಸಿದರು.</p>.<p>‘ಪವಿತ್ರಾ ರವಿ ಅವರು ಅಭಿವೃದ್ಧಿ ಕಾರ್ಯಗಳಿಗೆ ಸ್ಪಂದಿಸುತ್ತಿಲ್ಲ. ಸದಸ್ಯರನ್ನು ಪರಿಗಣಿಸದೆ<br /> ಹಿಟ್ಲರ್ ರೀತಿಯಲ್ಲಿ ವರ್ತಿಸುತ್ತಿದ್ದರು. ಇದ್ದರಿಂದ ಬೇಸತ್ತು ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಾಗಿತ್ತು’ ಎಂದು ಸದಸ್ಯ ಯಲ್ಲಪ್ಪ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ಪೂರ್ವ ತಾಲ್ಲೂಕಿನ ಕನ್ನಮಂಗಲ ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನು ಪದಚ್ಯುತಿಗೊಳಿಸಲಾಗಿದೆ.</p>.<p>ಗ್ರಾಮ ಪಂಚಾಯಿತಿ ಸದಸ್ಯರು ಮಂಡಿಸಿದ್ದ ಅವಿಶ್ವಾಸ ಗೊತ್ತುವಳಿಗೆ, 16 ಸದಸ್ಯರ ಪೈಕಿ 12 ಸದಸ್ಯರ ಮತಗಳು ಬಂದವು. ಉಪ ವಿಭಾಗಾಧಿಕಾರಿ ಕಿರಣ್ ನೇತೃತ್ವದಲ್ಲಿ ಅವಿಶ್ವಾಸ ಗೊತ್ತುವಳಿ ಸಭೆ ಮಂಗಳವಾರ ನಡೆಯಿತು.</p>.<p>ಅಧ್ಯಕ್ಷೆ ಪವಿತ್ರಾ ರವಿ ಸೇರಿ ನಾಲ್ಕು ಸದಸ್ಯರು ಸಭೆಗೆ ಗೈರಾಗಿದ್ದರು. ಅವಿಶ್ವಾಸ ನಿರ್ಣಯದಿಂದ ಅಧ್ಯಕ್ಷರು ಸ್ಥಾನದಿಂದ ಪದಚ್ಯುತಗೊಂಡಿದ್ದಾರೆ. ನೂತನ ಅಧ್ಯಕ್ಷರ ಆಯ್ಕೆಗೆ ಸದ್ಯದಲ್ಲೇ ದಿನಾಂಕ ನಿಗದಿಪಡಿಸುವುದಾಗಿ ಉಪ ವಿಭಾಗಾಧಿಕಾರಿ ತಿಳಿಸಿದರು.</p>.<p>‘ಪವಿತ್ರಾ ರವಿ ಅವರು ಅಭಿವೃದ್ಧಿ ಕಾರ್ಯಗಳಿಗೆ ಸ್ಪಂದಿಸುತ್ತಿಲ್ಲ. ಸದಸ್ಯರನ್ನು ಪರಿಗಣಿಸದೆ<br /> ಹಿಟ್ಲರ್ ರೀತಿಯಲ್ಲಿ ವರ್ತಿಸುತ್ತಿದ್ದರು. ಇದ್ದರಿಂದ ಬೇಸತ್ತು ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಾಗಿತ್ತು’ ಎಂದು ಸದಸ್ಯ ಯಲ್ಲಪ್ಪ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>