ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದರಾಜ್ಯ ಘಟಕದ ಅಧ್ಯಕ್ಷ ಆರ್.ಚಂದ್ರಪ್ಪ,‘ ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಮತ್ತು ಇತರ ಸಂಘ ಸಂಸ್ಥೆಗಳು ಕ್ರೀಡಾಂಗಣದ ಸ್ಥಳ ಉಪಯೋಗಿಸಲು ಕರ್ನಾಟಕ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಆದರೆ, ಕರ್ನಾಟಕ ಅಥ್ಲೆಟಿಕ್ಸ್ ಸಂಘಕ್ಕೆ ಯಾವುದೇ ಸೌಲಭ್ಯ ನೀಡದೆ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಮಲತಾಯಿ ಧೋರಣೆ ಕ್ರಮ ಅನುಸರಿಸಿದೆ’ ಎಂದು ಆರೋಪಿಸಿದರು.