ಬೆಂಗಳೂರು: ‘ಕಣ್ವ ಸೌಹಾರ್ದ ಕೋ–ಆಪರೇಟಿವ್ ಸೊಸೈಟಿಆಸ್ತಿಗಳ ಪರಿಶೀಲನೆ ಮತ್ತು ಮುಟ್ಟುಗೋಲು ಪ್ರಕ್ರಿಯೆಗಳನ್ನು ಕೂಡಲೇ ಪೂರ್ಣಗೊಳಿಸಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಈ ಸಂಬಂಧ ಕೆ.ಎಸ್.ರಮೇಶ್ ಮತ್ತು ಇತರ ಮೂವರು ಸಲ್ಲಿಸಿದ್ದ ಸಾರ್ಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ವಿಷಯದಲ್ಲಿ ಸರ್ಕಾರ ಅನುಸರಿಸುತ್ತಿರುವ ವಿಳಂಬಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.