ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು, ‘ಬಿಬಿಎಂಪಿ ವ್ಯಾಪ್ತಿಯ ಶಿವಾಜಿನಗರ ವಿಧಾನಸಭೆಯ ಪೂರ್ವವಲಯ, ಚಾಮರಾಜಪೇಟೆಯ ಪಶ್ಚಿಮವಲಯ, ಗಾಂಧಿನಗರ ಮತ್ತು ಚಿಕ್ಕಪೇಟೆ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಈ ಕರಗ ಉತ್ಸವ ಸಂಚರಿಸುತ್ತದೆ. ಈ ಭಾಗದಲ್ಲಿ ಸಂಚಾರಿ ಶೌಚಾಲಯ, ರಸ್ತೆ ಗುಂಡಿ, ಪಾದಚಾರಿ ಮಾರ್ಗ ಮತ್ತು ಚರಂಡಿಯ ಮತ್ತು ರಸ್ತೆ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಬಿಬಿಎಂಪಿಗೆ ನಿರ್ದೇಶನ ನೀಡಬೇಕು. ಈ ಎಲ್ಲ ಕಾರ್ಯಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳಬೇಕು’ ಎಂದು ಹೇಳಿದ್ದಾರೆ.