<p><strong>ಬೆಂಗಳೂರು:</strong> ‘ಹಲಸೂರುಪೇಟೆಯ (ತಿಗಳರಪೇಟೆ) ಧರ್ಮರಾಯಸ್ವಾಮಿ ದೇವಸ್ಥಾನದ ವತಿಯಿಂದ ಏಪ್ರಿಲ್ 6ರ ರಾತ್ರಿಯಿಂದ 7ರ ಮುಂಜಾನೆಯವರೆಗೂ ನಡೆಯುವ ವಿಶ್ವವಿಖ್ಯಾತ ಹೂವಿನ ಕರಗ ಮಹೋತ್ಸವಕ್ಕೆ ಅಗತ್ಯವಿರುವ ಮೂಲಸೌಲಭ್ಯ ಕಲ್ಪಿಸಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಪಿ.ಆರ್. ರಮೇಶ್ ಒತ್ತಾಯಿಸಿದ್ದಾರೆ.</p>.<p>ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು, ‘ಬಿಬಿಎಂಪಿ ವ್ಯಾಪ್ತಿಯ ಶಿವಾಜಿನಗರ ವಿಧಾನಸಭೆಯ ಪೂರ್ವವಲಯ, ಚಾಮರಾಜಪೇಟೆಯ ಪಶ್ಚಿಮವಲಯ, ಗಾಂಧಿನಗರ ಮತ್ತು ಚಿಕ್ಕಪೇಟೆ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಈ ಕರಗ ಉತ್ಸವ ಸಂಚರಿಸುತ್ತದೆ. ಈ ಭಾಗದಲ್ಲಿ ಸಂಚಾರಿ ಶೌಚಾಲಯ, ರಸ್ತೆ ಗುಂಡಿ, ಪಾದಚಾರಿ ಮಾರ್ಗ ಮತ್ತು ಚರಂಡಿಯ ಮತ್ತು ರಸ್ತೆ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಬಿಬಿಎಂಪಿಗೆ ನಿರ್ದೇಶನ ನೀಡಬೇಕು. ಈ ಎಲ್ಲ ಕಾರ್ಯಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳಬೇಕು’ ಎಂದು ಹೇಳಿದ್ದಾರೆ.</p>.<p>‘ಏಪ್ರಿಲ್ 6ರ ರಾತ್ರಿ ನಡೆಯುವ ಕರಗ ಉತ್ಸವವು ಕೆ.ಆರ್. ಮಾರುಕಟ್ಟೆ ಮತ್ತು ಮೆಜೆಸ್ಟಿಕ್ ಸಮೀಪದಲ್ಲಿದ್ದು, ಆ ದಿನ ರಾತ್ರಿ ಈ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೊ, ಬಿಎಂಟಿಸಿ ಬಸ್ಗಳ ಸಂಚಾರಕ್ಕೆ ಅವಕಾಶ ನೀಡಬೇಕು. ಕರಗ ಉತ್ಸವ ಸಂಚರಿಸುವ ಪ್ರದೇಶದಲ್ಲಿ ಹೆಚ್ಚು ಜನದಟ್ಟಣೆಯಾಗುವುದರಿಂದ ಪೊಲೀಸ್ ಬಂದೋಬಸ್ತ್ ಕಲ್ಪಿಸಬೇಕು. ಈ ಭಾಗದಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗದಂತೆ ನಿರ್ದೇಶನ ನೀಡಬೇಕು. ಸಾಂಕ್ರಾಮಿಕ ರೋಗಗಳು ಹರಡದಂತೆ ಆರೋಗ್ಯ ಇಲಾಖೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಹಲಸೂರುಪೇಟೆಯ (ತಿಗಳರಪೇಟೆ) ಧರ್ಮರಾಯಸ್ವಾಮಿ ದೇವಸ್ಥಾನದ ವತಿಯಿಂದ ಏಪ್ರಿಲ್ 6ರ ರಾತ್ರಿಯಿಂದ 7ರ ಮುಂಜಾನೆಯವರೆಗೂ ನಡೆಯುವ ವಿಶ್ವವಿಖ್ಯಾತ ಹೂವಿನ ಕರಗ ಮಹೋತ್ಸವಕ್ಕೆ ಅಗತ್ಯವಿರುವ ಮೂಲಸೌಲಭ್ಯ ಕಲ್ಪಿಸಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಪಿ.ಆರ್. ರಮೇಶ್ ಒತ್ತಾಯಿಸಿದ್ದಾರೆ.</p>.<p>ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು, ‘ಬಿಬಿಎಂಪಿ ವ್ಯಾಪ್ತಿಯ ಶಿವಾಜಿನಗರ ವಿಧಾನಸಭೆಯ ಪೂರ್ವವಲಯ, ಚಾಮರಾಜಪೇಟೆಯ ಪಶ್ಚಿಮವಲಯ, ಗಾಂಧಿನಗರ ಮತ್ತು ಚಿಕ್ಕಪೇಟೆ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಈ ಕರಗ ಉತ್ಸವ ಸಂಚರಿಸುತ್ತದೆ. ಈ ಭಾಗದಲ್ಲಿ ಸಂಚಾರಿ ಶೌಚಾಲಯ, ರಸ್ತೆ ಗುಂಡಿ, ಪಾದಚಾರಿ ಮಾರ್ಗ ಮತ್ತು ಚರಂಡಿಯ ಮತ್ತು ರಸ್ತೆ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಬಿಬಿಎಂಪಿಗೆ ನಿರ್ದೇಶನ ನೀಡಬೇಕು. ಈ ಎಲ್ಲ ಕಾರ್ಯಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳಬೇಕು’ ಎಂದು ಹೇಳಿದ್ದಾರೆ.</p>.<p>‘ಏಪ್ರಿಲ್ 6ರ ರಾತ್ರಿ ನಡೆಯುವ ಕರಗ ಉತ್ಸವವು ಕೆ.ಆರ್. ಮಾರುಕಟ್ಟೆ ಮತ್ತು ಮೆಜೆಸ್ಟಿಕ್ ಸಮೀಪದಲ್ಲಿದ್ದು, ಆ ದಿನ ರಾತ್ರಿ ಈ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೊ, ಬಿಎಂಟಿಸಿ ಬಸ್ಗಳ ಸಂಚಾರಕ್ಕೆ ಅವಕಾಶ ನೀಡಬೇಕು. ಕರಗ ಉತ್ಸವ ಸಂಚರಿಸುವ ಪ್ರದೇಶದಲ್ಲಿ ಹೆಚ್ಚು ಜನದಟ್ಟಣೆಯಾಗುವುದರಿಂದ ಪೊಲೀಸ್ ಬಂದೋಬಸ್ತ್ ಕಲ್ಪಿಸಬೇಕು. ಈ ಭಾಗದಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗದಂತೆ ನಿರ್ದೇಶನ ನೀಡಬೇಕು. ಸಾಂಕ್ರಾಮಿಕ ರೋಗಗಳು ಹರಡದಂತೆ ಆರೋಗ್ಯ ಇಲಾಖೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>