<p><strong>ಬೆಂಗಳೂರು: </strong>‘ಅನರ್ಹ ಶಾಸಕರು ಬಿಜೆಪಿಗೆ ಅಂಟಿದ ವೈರಸ್ ಎಂದು ಸ್ವತಃ ಬಿ.ಎಲ್.ಸಂತೋಷ್ ಹೇಳಿದ್ದಾರೆ’ ಎಂಬ ಪಿ.ಆರ್.ರಮೇಶ್ ಅವರ ಮಾತು ವಿಧಾನ ಪರಿಷತ್ನಲ್ಲಿ ಇಬ್ಬರು ಸಚಿವರನ್ನು ಕೆರಳುವಂತೆ ಮಾಡಿತು.</p>.<p>ಮಂಗಳೂರು ಗಲಭೆ, ಅದರಿಂದ ಆಡಳಿತ ಕುಸಿದಿದೆ ಎಂಬ ವಿಷಯದ ಮೇಲೆ ಬುಧವಾರ ಮುಂದುವರಿದ ಚರ್ಚೆಯ ವೇಳೆ ಆರ್.ಬಿ.ತಿಮ್ಮಾಪುರ ಅವರು ಮಾತನಾಡುತ್ತಿದ್ದ ವೇಳೆ ಈ ಪ್ರಸಂಗ ನಡೆಯಿತು.</p>.<p>ಸರ್ಕಾರದ ಆಡಳಿತ ವ್ಯವಸ್ಥೆ ಕುಸಿದಿದೆ ಎಂದು ತಿಮ್ಮಾಪುರ ಹೇಳುತ್ತಿದ್ದಂತೆ ಮಧ್ಯ ಪ್ರವೇಶಿಸಿದ ರಮೇಶ್, ಅನರ್ಹರು ವೈರಸ್ ಎಂಬುದಾಗಿ ಸಂತೋಷ್ ಹೇಳಿದ್ದನ್ನು ಉಲ್ಲೇಖಿಸಿದರು.</p>.<p>ಸದನದಲ್ಲಿದ್ದ ಸಚಿವರಾದ ಎಸ್.ಟಿ.ಸೋಮಶೇಖರ್ ಮತ್ತು ಬಿ.ಸಿ.ಪಾಟೀಲ ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಸುಪ್ರೀಂ ಕೋರ್ಟ್ ತೀರ್ಪಿನಂತೆ ತಾವು ಮತ್ತೆ ಜನರಿಂದ ಆಯ್ಕೆಯಾಗಿ ಬಂದವರು ಎಂದರು.</p>.<p>ಕಾಂಗ್ರೆಸ್ನ ಯೋಗ್ಯತೆಗೆ ಕೆಪಿಸಿಸಿ ಅಧ್ಯಕ್ಷರನ್ನು ಆಯ್ಕೆ ಮಾಡುವುದೇ ಸಾಧ್ಯವಾಗಿಲ್ಲ ಎಂದರು.ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರೂ ಸಚಿವರನ್ನು ಸಮರ್ಥಿಸಿದರು. ಕೊನೆಗೆ ಸಭಾಪತಿ ಪ್ರತಾಪ ಚಂದ್ರ ಶೆಟ್ಟಿ ಸಚಿವರನ್ನು ಸಮಾಧಾನಪಡಿಸಿ ಚರ್ಚೆ ಮುಂದುವರಿಯಲು ಅವಕಾಶ ಮಾಡಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಅನರ್ಹ ಶಾಸಕರು ಬಿಜೆಪಿಗೆ ಅಂಟಿದ ವೈರಸ್ ಎಂದು ಸ್ವತಃ ಬಿ.ಎಲ್.ಸಂತೋಷ್ ಹೇಳಿದ್ದಾರೆ’ ಎಂಬ ಪಿ.ಆರ್.ರಮೇಶ್ ಅವರ ಮಾತು ವಿಧಾನ ಪರಿಷತ್ನಲ್ಲಿ ಇಬ್ಬರು ಸಚಿವರನ್ನು ಕೆರಳುವಂತೆ ಮಾಡಿತು.</p>.<p>ಮಂಗಳೂರು ಗಲಭೆ, ಅದರಿಂದ ಆಡಳಿತ ಕುಸಿದಿದೆ ಎಂಬ ವಿಷಯದ ಮೇಲೆ ಬುಧವಾರ ಮುಂದುವರಿದ ಚರ್ಚೆಯ ವೇಳೆ ಆರ್.ಬಿ.ತಿಮ್ಮಾಪುರ ಅವರು ಮಾತನಾಡುತ್ತಿದ್ದ ವೇಳೆ ಈ ಪ್ರಸಂಗ ನಡೆಯಿತು.</p>.<p>ಸರ್ಕಾರದ ಆಡಳಿತ ವ್ಯವಸ್ಥೆ ಕುಸಿದಿದೆ ಎಂದು ತಿಮ್ಮಾಪುರ ಹೇಳುತ್ತಿದ್ದಂತೆ ಮಧ್ಯ ಪ್ರವೇಶಿಸಿದ ರಮೇಶ್, ಅನರ್ಹರು ವೈರಸ್ ಎಂಬುದಾಗಿ ಸಂತೋಷ್ ಹೇಳಿದ್ದನ್ನು ಉಲ್ಲೇಖಿಸಿದರು.</p>.<p>ಸದನದಲ್ಲಿದ್ದ ಸಚಿವರಾದ ಎಸ್.ಟಿ.ಸೋಮಶೇಖರ್ ಮತ್ತು ಬಿ.ಸಿ.ಪಾಟೀಲ ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಸುಪ್ರೀಂ ಕೋರ್ಟ್ ತೀರ್ಪಿನಂತೆ ತಾವು ಮತ್ತೆ ಜನರಿಂದ ಆಯ್ಕೆಯಾಗಿ ಬಂದವರು ಎಂದರು.</p>.<p>ಕಾಂಗ್ರೆಸ್ನ ಯೋಗ್ಯತೆಗೆ ಕೆಪಿಸಿಸಿ ಅಧ್ಯಕ್ಷರನ್ನು ಆಯ್ಕೆ ಮಾಡುವುದೇ ಸಾಧ್ಯವಾಗಿಲ್ಲ ಎಂದರು.ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರೂ ಸಚಿವರನ್ನು ಸಮರ್ಥಿಸಿದರು. ಕೊನೆಗೆ ಸಭಾಪತಿ ಪ್ರತಾಪ ಚಂದ್ರ ಶೆಟ್ಟಿ ಸಚಿವರನ್ನು ಸಮಾಧಾನಪಡಿಸಿ ಚರ್ಚೆ ಮುಂದುವರಿಯಲು ಅವಕಾಶ ಮಾಡಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>