ದೊಡ್ಡಬ್ಯಾಲಕೆರೆ ಗ್ರಾಮದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರನ್ನು ಭೇಟಿ ಮಾಡಿ ಸಮಸ್ಯೆಗಳನ್ನು ಹೇಳಿಕೊಂಡಿದ್ದೆವು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಜತೆ ಚರ್ಚೆ ಮಾಡಿ, ಸಮಸ್ಯೆಗೆ ಪರಿಹಾರ ಒದಗಿಸುವ ಭರವಸೆಯನ್ನು ಅವರು ನೀಡಿದ್ದರು. ಹೀಗಾಗಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ಸಂದರ್ಭದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ಮಾಡುವುದನ್ನು ಕೈ ಬಿಟ್ಟಿದ್ದೆವು’ ಎಂದು ಅವರು ತಿಳಿಸಿದರು.