ಈ ಬಗ್ಗೆ ಮಾಹಿತಿ ನೀಡಿದ ಕರವೇ ಅಧ್ಯಕ್ಷ ಟಿ.ಎ. ನಾರಾಯಣಗೌಡ, ‘ಕಾರ್ಯಕರ್ತರು ಯಾರ ಮೇಲೆಯೂ ಹಲ್ಲೆ ಮಾಡಿಲ್ಲ. ಅಷ್ಟಾದರೂ ವೈದ್ಯರು ಪ್ರತಿಭಟನೆ ಮಾಡುತ್ತಿದ್ದಾರೆ. ಗುರುವಾರವೂ ಒಳರೋಗಿಗಳ ವಿಭಾಗ ಬಂದ್ ಮಾಡುವುದಾಗಿ ಹೇಳಿದ್ದಾರೆ. ಹೀಗಾಗಿ, ನಮ್ಮ ಕಾರ್ಯಕರ್ತರು ಪೊಲೀಸರಿಗೆ ಶರಣಾಗಲು ನಿರ್ಧರಿಸಿದ್ದಾರೆ’ ಎಂದರು.