ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ ಆರೋಪ ಸಂಬಂಧ ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ನಾರಾಯಣಗೌಡ ಅವರು ನ್ಯಾಯಾಲಯದ ವಿಚಾರಣೆಗೆ ಗೈರಾಗಿದ್ದರು ಎಂಬ ಕಾರಣಕ್ಕೆ ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಯಾಗಿತ್ತು. ಈ ಪ್ರಕರಣದಲ್ಲಿ ಮಂಗಳವಾರ ಅವರನ್ನು ಮತ್ತೆ ಬಂಧಿಸಲಾಗಿತ್ತು. ಅವರ ಪರ ವಕೀಲ ಎಲ್.ಜಿ.ಕುಮಾರ್, 30ನೇ ಎಸಿಎಂಎಂ ಕೋರ್ಟ್ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಬುಧವಾರ ಮಧ್ಯಾಹ್ನ ₹1 ಲಕ್ಷ ಬಾಂಡ್ ಮತ್ತು ಇಬ್ಬರು ಶ್ಯೂರಿಟಿ ಪಡೆದು ಜಾಮೀನು ನೀಡಿತ್ತು.