<p><strong>ಬೆಂಗಳೂರು:</strong> ‘ಜಾನಪದ ಕಲೆ, ಸಾಹಿತ್ಯದ ಉಳಿವಿಗಾಗಿ ಶ್ರಮಿಸಿದ ಜಾನಪದ ತಜ್ಞ ಎಸ್.ಕೆ. ಕರೀಂಖಾನ್ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಬೇಕು’ ಎಂದು ಕನ್ನಡ ಪರ ಹೋರಾಟಗಾರ ಜಾಣಗೆರೆ ವೆಂಕಟರಾಮಯ್ಯ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. </p>.<p>ಕನ್ನಡ ಗೆಳೆಯರ ಬಳಗ ಮತ್ತು ಕರ್ನಾಟಕ ವಿಕಾಸ ರಂಗ ಜಂಟಿಯಾಗಿ ನಗರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಕನ್ನಡ ಬಾವುಟ ಹಾರಿಸಿದವರು ನೆನಪಿನ ಮಾಲೆ’ ಸರಣಿ ಕಾರ್ಯಕ್ರಮದಲ್ಲಿ ಕರೀಂಖಾನ್ ಅವರ ಬಗ್ಗೆ ಉಪನ್ಯಾಸ ನೀಡಿದರು.</p>.<p>‘ಎಲ್ಲ ಸಾಹಿತ್ಯಕ್ಕೆ ಮೂಲ ಬೇರು ಜಾನಪದ ಸಾಹಿತ್ಯ. ಜಾನಪದ ಸಾಹಿತ್ಯ ಮತ್ತು ಕಲೆಗೆ ಕರೀಂಖಾನ್ ಗೌರವ ತಂದುಕೊಟ್ಟಿದ್ದಾರೆ. ಸಾಗರ ತಾಲ್ಲೂಕಿನಲ್ಲಿ 5 ಸಾವಿರ ಅಡಿ ಎತ್ತರದಲ್ಲಿರುವ ಮೇಘಾನೆ ಎಂಬ ಗ್ರಾಮದಲ್ಲಿ ಕ್ಷೇತ್ರ ಕಾರ್ಯ ಮಾಡಿ, ಅಲ್ಲಿನ ಸಂಸ್ಕೃತಿಯ ಬಗ್ಗೆ ಚಿತ್ರೀಕರಣ ಮಾಡಿದ್ದಾರೆ. ಅವರು ಈ ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ಜಾನಪದ ಕಲೆಯನ್ನು ರಕ್ಷಣೆ ಮಾಡಿರುವ ಅವರ ಹೆಸರಿನಲ್ಲಿ ಸರ್ಕಾರವು ಪ್ರಶಸ್ತಿ ಸ್ಥಾಪಿಸಿ, ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಗೆ ಶ್ರಮಿಸಿದವರಿಗೆ ಆ ಪ್ರಶಸ್ತಿ ನೀಡಬೇಕು. ಈ ಬಗ್ಗೆ ಸರ್ಕಾರಕ್ಕೆ ಆಗ್ರಹಿಸಲು ಸಾಹಿತಿಗಳ ನಿಯೋಗವನ್ನು ಮುಖ್ಯಮಂತ್ರಿ ಅವರ ಬಳಿ ಕರೆದೊಯ್ಯಬೇಕು’ ಎಂದರು. </p>.<p>ಕನ್ನಡ ಗೆಳಯರ ಬಳಗದ ಸಂಚಾಲಕ ರಾ.ನಂ.ಚಂದ್ರಶೇಖರ, ‘ಅಪಾರ ಪ್ರತಿಭೆ ಹೊಂದಿದ್ದ ಕರೀಂಖಾನ್ ಅವರಿಗೆ ಸೂಕ್ತ ಗೌರವ, ಸ್ಥಾನಮಾನಗಳು ಸಿಗಲಿಲ್ಲ. ಅಜ್ಞಾತ ಕವಿಗಳ ಹಾಡುಗಳು ನಾಶವಾಗಬಾರದೆಂದು ಅವುಗಳನ್ನು ಸಂಗ್ರಹಿಸಿ, ಪ್ರಕಟಿಸಿದ್ದಾರೆ’ ಎಂದು ಹೇಳಿದರು. </p>.<p>ಕರ್ನಾಟಕ ವಿಕಾಸರಂಗದ ಅಧ್ಯಕ್ಷ ವ.ಚ.ಚನ್ನೇಗೌಡ, ‘ಉರ್ದು ಮನೆ ಮಾತಾಗಿದ್ದರೂ ಕನ್ನಡ ಮತ್ತು ಸಂಸ್ಕೃತವನ್ನು ಕರೀಂಖಾನ್ ಅವರು ಅಧ್ಯಯನ ಮಾಡಿದ್ದರು. ಹೆಚ್ಚು ವಿದ್ಯಾಭ್ಯಾಸ ಮಾಡದಿದ್ದರೂ, ಜಾನಪದ ಪ್ರಕಾರ, ಭಗವದ್ಗೀತೆ, ಭಾಗವತ, ಶಿವಪುರಾಣಗಳ ಚಾರಿತ್ರಿಕ ಸಂಗತಿಗಳನ್ನು ನಿಂತಲ್ಲಿಯೇ ಹೇಳುವಷ್ಟು ಪ್ರತಿಭಾವಂತರಾಗಿದ್ದರು’ ಎಂದು ಸ್ಮರಿಸಿಕೊಂಡರು. </p>.<p>ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಮನು ಬಳಿಗಾರ್ ಹಾಗೂ ಕರೀಂಖಾನ್ ಅವರ ಕುಟುಂಬಸ್ಥರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಜಾನಪದ ಕಲೆ, ಸಾಹಿತ್ಯದ ಉಳಿವಿಗಾಗಿ ಶ್ರಮಿಸಿದ ಜಾನಪದ ತಜ್ಞ ಎಸ್.ಕೆ. ಕರೀಂಖಾನ್ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಬೇಕು’ ಎಂದು ಕನ್ನಡ ಪರ ಹೋರಾಟಗಾರ ಜಾಣಗೆರೆ ವೆಂಕಟರಾಮಯ್ಯ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. </p>.<p>ಕನ್ನಡ ಗೆಳೆಯರ ಬಳಗ ಮತ್ತು ಕರ್ನಾಟಕ ವಿಕಾಸ ರಂಗ ಜಂಟಿಯಾಗಿ ನಗರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಕನ್ನಡ ಬಾವುಟ ಹಾರಿಸಿದವರು ನೆನಪಿನ ಮಾಲೆ’ ಸರಣಿ ಕಾರ್ಯಕ್ರಮದಲ್ಲಿ ಕರೀಂಖಾನ್ ಅವರ ಬಗ್ಗೆ ಉಪನ್ಯಾಸ ನೀಡಿದರು.</p>.<p>‘ಎಲ್ಲ ಸಾಹಿತ್ಯಕ್ಕೆ ಮೂಲ ಬೇರು ಜಾನಪದ ಸಾಹಿತ್ಯ. ಜಾನಪದ ಸಾಹಿತ್ಯ ಮತ್ತು ಕಲೆಗೆ ಕರೀಂಖಾನ್ ಗೌರವ ತಂದುಕೊಟ್ಟಿದ್ದಾರೆ. ಸಾಗರ ತಾಲ್ಲೂಕಿನಲ್ಲಿ 5 ಸಾವಿರ ಅಡಿ ಎತ್ತರದಲ್ಲಿರುವ ಮೇಘಾನೆ ಎಂಬ ಗ್ರಾಮದಲ್ಲಿ ಕ್ಷೇತ್ರ ಕಾರ್ಯ ಮಾಡಿ, ಅಲ್ಲಿನ ಸಂಸ್ಕೃತಿಯ ಬಗ್ಗೆ ಚಿತ್ರೀಕರಣ ಮಾಡಿದ್ದಾರೆ. ಅವರು ಈ ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ಜಾನಪದ ಕಲೆಯನ್ನು ರಕ್ಷಣೆ ಮಾಡಿರುವ ಅವರ ಹೆಸರಿನಲ್ಲಿ ಸರ್ಕಾರವು ಪ್ರಶಸ್ತಿ ಸ್ಥಾಪಿಸಿ, ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಗೆ ಶ್ರಮಿಸಿದವರಿಗೆ ಆ ಪ್ರಶಸ್ತಿ ನೀಡಬೇಕು. ಈ ಬಗ್ಗೆ ಸರ್ಕಾರಕ್ಕೆ ಆಗ್ರಹಿಸಲು ಸಾಹಿತಿಗಳ ನಿಯೋಗವನ್ನು ಮುಖ್ಯಮಂತ್ರಿ ಅವರ ಬಳಿ ಕರೆದೊಯ್ಯಬೇಕು’ ಎಂದರು. </p>.<p>ಕನ್ನಡ ಗೆಳಯರ ಬಳಗದ ಸಂಚಾಲಕ ರಾ.ನಂ.ಚಂದ್ರಶೇಖರ, ‘ಅಪಾರ ಪ್ರತಿಭೆ ಹೊಂದಿದ್ದ ಕರೀಂಖಾನ್ ಅವರಿಗೆ ಸೂಕ್ತ ಗೌರವ, ಸ್ಥಾನಮಾನಗಳು ಸಿಗಲಿಲ್ಲ. ಅಜ್ಞಾತ ಕವಿಗಳ ಹಾಡುಗಳು ನಾಶವಾಗಬಾರದೆಂದು ಅವುಗಳನ್ನು ಸಂಗ್ರಹಿಸಿ, ಪ್ರಕಟಿಸಿದ್ದಾರೆ’ ಎಂದು ಹೇಳಿದರು. </p>.<p>ಕರ್ನಾಟಕ ವಿಕಾಸರಂಗದ ಅಧ್ಯಕ್ಷ ವ.ಚ.ಚನ್ನೇಗೌಡ, ‘ಉರ್ದು ಮನೆ ಮಾತಾಗಿದ್ದರೂ ಕನ್ನಡ ಮತ್ತು ಸಂಸ್ಕೃತವನ್ನು ಕರೀಂಖಾನ್ ಅವರು ಅಧ್ಯಯನ ಮಾಡಿದ್ದರು. ಹೆಚ್ಚು ವಿದ್ಯಾಭ್ಯಾಸ ಮಾಡದಿದ್ದರೂ, ಜಾನಪದ ಪ್ರಕಾರ, ಭಗವದ್ಗೀತೆ, ಭಾಗವತ, ಶಿವಪುರಾಣಗಳ ಚಾರಿತ್ರಿಕ ಸಂಗತಿಗಳನ್ನು ನಿಂತಲ್ಲಿಯೇ ಹೇಳುವಷ್ಟು ಪ್ರತಿಭಾವಂತರಾಗಿದ್ದರು’ ಎಂದು ಸ್ಮರಿಸಿಕೊಂಡರು. </p>.<p>ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಮನು ಬಳಿಗಾರ್ ಹಾಗೂ ಕರೀಂಖಾನ್ ಅವರ ಕುಟುಂಬಸ್ಥರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>