ಹಿಂದೆ ಕಾಂಗ್ರೆಸ್ನ ಎಂ.ಆರ್.ಸೀತಾರಾಮ್ ಅವರು ಎರಡು ಬಾರಿ ಈ ಕ್ಷೇತ್ರದಲ್ಲಿ ಗೆದ್ದಿದ್ದರು. ಪರಂಪರಾಗತವಾಗಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ಸೇತರ ಪಕ್ಷಗಳೇ ಗೆಲುವು ಸಾಧಿಸುತ್ತಾ ಬಂದಿವೆ. ಹಿಂದಿನ ಚುನಾವಣೆಯಲ್ಲಿ, ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಮೊಮ್ಮಗ ಶ್ರೀಪಾದರೇಣು ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಕೊನೆಗಳಿಗೆಯಲ್ಲಿ ಟಿಕೆಟ್ ನೀಡಿದ್ದರಿಂದಾಗಿ ತಯಾರಿ ನಡೆಸಲು ಸಾಕಷ್ಟು ಸಮಯ ಸಿಕ್ಕಿರಲಿಲ್ಲ. ಈ ಬಾರಿ ಅವರೂ ಆಕಾಂಕ್ಷಿಯಾಗಿದ್ದಾರೆ. ಅಲ್ಲದೇ, ಈಸ್ಟ್ವೆಸ್ಟ್ ಸಮೂಹ ಸಂಸ್ಥೆಯ ರವಿಕಿರಣ್ ಅವರ ಪತ್ನಿ ರಶ್ಮಿ ರವಿಕಿರಣ್, ಕೆಪಿಸಿಸಿ ಪ್ರಧಾನಕಾರ್ಯದರ್ಶಿ ಶಫಿವುಲ್ಲಾ, ಮಾಜಿ ಮೇಯರ್ ಲಕ್ಕಣ್ಣ ಅವರ ಪುತ್ರ ಗಿರೀಶ್ ಲಕ್ಕಣ್ಣ ಅವರು ಟಿಕೆಟ್ ಮೇಲೆ ಕಣ್ಣಿಟ್ಟಿದ್ದಾರೆ.