ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಶ್ವತ್ಥನಾರಾಯಣ ಪುನರಾಯ್ಕೆ: ಕಾರ್ಯಕರ್ತರ ಸಂಭ್ರಮ

Published 13 ಮೇ 2023, 19:31 IST
Last Updated 13 ಮೇ 2023, 19:31 IST
ಅಕ್ಷರ ಗಾತ್ರ

ಬೆಂಗಳೂರು: ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದಿಂದ ಸತತ ನಾಲ್ಕನೇ ಬಾರಿಗೆ ಆಯ್ಕೆಯಾಗಿರುವ ಡಾ. ಸಿ ಎನ್ ಅಶ್ವತ್ಥನಾರಾಯಣ ಅವರ ಗೆಲುವನ್ನು ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಶನಿವಾರ ಸಂಭ್ರಮಿಸಿದರು.

ಮಲ್ಲೇಶ್ವರದಲ್ಲಿರುವ ಶಾಸಕರ ಕಚೇರಿ ಬಳಿ ಜಮಾಯಿಸಿದ ಜನರು ಕುಣಿದು ಕುಪ್ಪಳಿಸಿ ಸಂಭ್ರಮಪಟ್ಟರು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಸಿ. ಎನ್. ಅಶ್ವತ್ಥನಾರಾಯಣ, ‘ಕ್ಷೇತ್ರದ ಪ್ರತಿನಿಧಿಯಾಗಿ ಏನೇನು ಕೆಲಸಗಳು ಆಗಬೇಕಿದೆಯೋ ಅದನ್ನು ಮುಂದುವರಿಸುತ್ತೇನೆ. ರಸ್ತೆ, ನೀರು, ಶಿಕ್ಷಣ, ಆರೋಗ್ಯ, ಮೂಲಸೌಕರ್ಯ ಸೇರಿ ಇಲ್ಲಿನ ಸರ್ವಾಂಗೀಣ ಅಭಿವೃದ್ಧಿಗೆ ಈ ಹಿಂದಿನಂತೆಯೇ ಒತ್ತು ನೀಡುತ್ತೇನೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT