ವಿಧಾನಸಭೆಯಲ್ಲಿ ಶುಕ್ರವಾರ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ’ಈ ಜಮೀನು ಮುಖ್ಯಮಂತ್ರಿಯಾಗಿದ್ದ ದಿವಂಗತ ಆರ್. ಗುಂಡೂರಾವ್ ಅವರ ವಶದಲ್ಲಿತ್ತು. ಸರ್ಕಾರಿ ಭೂಮಿ ಎಂಬ ಕಾರಣಕ್ಕೆ ಬಳಿಕ ಅದನ್ನು ವಶಕ್ಕೆ ಪಡೆದಿತ್ತು. ಯಲಹಂಕದ ಹಿಂದಿನ ತಹಶೀಲ್ದಾರ್ ನಕಲಿ ದಾಖಲೆಗಳನ್ನು ಸೃಷ್ಟಿಸಿ ತಮಗೆ ಬೇಕಾದ ಹಾಗೆ ವರದಿ ಕೊಟ್ಟಿದ್ದಾರೆ. ಈ ಮೂಲಕ ಭೂ ಕಬಳಿಕೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಇದು ಹತ್ತಾರು ಕೋಟಿ ಬೆಲೆಬಾಳುವ ಜಮೀನು. ಮೂರು ದಿನಗಳ ಹಿಂದೆ ಕೆಲವು ವ್ಯಕ್ತಿಗಳು ಈ ಜಾಗವನ್ನು ತಮ್ಮ ಸ್ವಾಧೀನಕ್ಕೆ ಪಡೆದುಕೊಂಡು ಮಚ್ಚು ಲಾಂಗ್ ಹಿಡಿದುಕೊಂಡು ಸ್ಥಳೀಯ ಜನರಿಗೆ ಬೆದರಿಕೆ ಹಾಕಿದ್ದಾರೆ. ಈ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ‘ ಎಂದು ಗಮನ ಸೆಳೆದರು.