ಹುಬ್ಬಳ್ಳಿಯಲ್ಲಿ ಪ್ರತಿಭಟನಕಾರರು ಮೆರವಣಿಗೆ ನಡೆಸಿ ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು. ಬೀದರ್ನಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಗದಗದಲ್ಲಿ ಪ್ರಥಮ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ವಿದ್ಯಾರ್ಥಿಗಳು ಹಾಜರಾದರು. ಉಳಿದಂತೆ ಮೈಸೂರು, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಚಿಕ್ಕಬಳ್ಳಾಪುರ. ರಾಮನಗರ, ಕಲಬುರ್ಗಿ, ವಿಜಯಪುರ, ಬಾಗಲಕೋಟೆ, ಉಡುಪಿ, ರಾಯಚೂರು, ಕಾರವಾರ, ಹಾಸನದಲ್ಲಿ ಬಂದ್ ಕರೆಗೆ ಜನರು ಕಿವಿಗೊಡಲಿಲ್ಲ.